ಬ್ರೇಕಿಂಗ್ ನ್ಯೂಸ್
27-12-23 09:26 pm Mangalore Correspondent ಕರಾವಳಿ
ಪುತ್ತೂರು, ಡಿ.27: ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಕಡಬದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಪಕ್ಷದ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಯವರ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಅಲ್ಲಿ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯ ಮಂತ್ರಿಯಾಗಿದ್ದೇನೆ ಎಂದು ಹೇಳಿದ್ದು ನನ್ನ ಸ್ಥಾನಕ್ಕೆ ಮುಳುವಾಯಿತು ಎಂದರು.
ಅಷ್ಟಕ್ಕೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ನನಗೆ ಸೂಚನೆ ನೀಡಲಾಗಿತ್ತು ಎಂದು ಹೇಳಿದ ಸದಾನಂದ ಗೌಡ, ನಾನು ಚುನಾವಣೆ ರಾಜಕೀಯದಿಂದ ನಿವೃತ್ತನಾಗಿದ್ದು, ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಆದ್ದರಿಂದ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯನಾಗಿರುತ್ತೇನೆ ಎಂದರು.
ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ. ಹರಕು ನಾಲಗೆ, ಚೀಲ ತುಂಬಾ ದುಡ್ಡು ಮತ್ತು ಗುಂಪುಗಾರಿಕೆಯಿಂದಲೇ ರಾಜಕೀಯ ನಡೆಯುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಪಕ್ಷದ ಕೆಲಸ ಮಾಡುತ್ತೇನೆ ಎಂದರು.
I Was Made To Resign From The Cm Post Soon After My Talk At Vokkaliga Community Function Reveals Dv Sadananda Gowda
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm