ಬ್ರೇಕಿಂಗ್ ನ್ಯೂಸ್
27-12-23 10:16 pm Mangalore Correspondent ಕರಾವಳಿ
ಮಂಗಳೂರು, ಡಿ.27: ಮುಸ್ಲಿಂ ಸಮುದಾಯದಲ್ಲಿ ಪುರುಷರೇ ಬಲಾಡ್ಯರು. ಮಹಿಳೆಯರ ಮೇಲೆ ಸಂಪೂರ್ಣ ಹಿಡಿತ ಹೊಂದಿದ್ದಾರೆ. ತಲಾಖ್ ನಿಷೇಧದಿಂದ ಮಹಿಳೆಯರಿಗೂ ಪ್ರಾತಿನಿಧ್ಯ ಸಿಗುತ್ತಿದ್ದು ಸಮಾಜದಲ್ಲಿ ಅವರು ಮುಂಚೂಣಿಗೆ ಬಂದಲ್ಲಿ ತಮಗೆ ಮರ್ಯಾದೆ ಸಿಗುವುದಿಲ್ಲ ಎಂಬ ಅಳುಕಿನಿಂದ ಮುಸ್ಲಿಂ ಹೆಣ್ಣು ಮಕ್ಕಳನ್ನ ಮುಂದಿಟ್ಟು ಬಲವಂತವಾಗಿ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲಿಸುವ ಷಡ್ಯಂತ್ರ ನಡೆಸಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.
ಪ್ರಭಾಕರ್ ಭಟ್ ಅವರು ಮುಸ್ಲಿಂ ಹೆಣ್ಣು ಸಮಾಜಕ್ಕೆ ಸಿಕ್ಕಿರುವ ಗೌರವ, ತ್ರಿವಳಿ ತಲಾಕ್ ನಿಷೇಧ, ಪ್ರಧಾನಿ ಮೋದಿ ಅವರ ದೃಢ ಸಂಕಲ್ಪವನ್ನು ಹೇಳಿದ್ದಾರೆ ಹೊರತು ಇದರಲ್ಲಿ ಮುಸ್ಲಿಂ ಮಹಿಳಾ ಸಮಾಜಕ್ಕೆ ನೋವಾಗುವ ವಿಚಾರವಿಲ್ಲ ಎಂದು ಡಾ.ಪ್ರಭಾಕರ್ ಭಟ್ ಹೇಳಿಕೆಯನ್ನು ಭರತ್ ಶೆಟ್ಟಿ ಸಮರ್ಥಿಸಿಕೊಂಡಿದ್ದಾರೆ. ಖಟ್ಟರ್ ಹಿಂದುತ್ವ, ಆರ್ ಎಸ್ ಎಸ್ ನೇತಾರರಿಗೆ, ಹಿಂದೂ ವಿರೋಧಿ ಸರಕಾರ ಬಂದಾಗ ಹಿಂದೂಗಳ ವಿರುದ್ಧ ಕಾನೂನು ಕ್ರಮ ನಿರೀಕ್ಷಿತ. ಅದನ್ನು ಸಮರ್ಥವಾಗಿ ಎದುರಿಸಲಾಗುವುದು ಎಂದು ಹೇಳಿದ್ದಾರೆ.

ಮುಸ್ಲಿಂ ಸಮುದಾಯದಲ್ಲಿ ಪುರುಷ ಸಮಾಜ ಬಲಾಢ್ಯವಾಗಿದ್ದು ಹೆಣ್ಣು ಮಕ್ಕಳನ್ನು ಅಡಿಗೆ ಕೋಣೆಗೆ ಸೀಮಿತಗೊಳಿಸುವಂತಹ ಸಂಕುಚಿತ ಮನೋಭಾವವನ್ನು ಹೊಂದಿರುವವರ ಸಂಖ್ಯೆ ಈಗಲೂ ಹೆಚ್ಚಿದೆ ಎಂದು ಭರತ್ ಶೆಟ್ಟಿ ಟೀಕಿಸಿದ್ದು, ಮೋದಿ ಸರಕಾರ ನೊಂದ ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಬಾಳಿನಲ್ಲಿ ಬೆಳಕು ತಂದ ಸರಕಾರ. ಇದನ್ನು ಕಾಂಗ್ರೆಸ್, ಎಡಪಕ್ಷಗಳು ಸಹಿಸದೆ ಇಂತಹ ಕುತಂತ್ರ ಹೆಣೆಯುತ್ತಿವೆ ಎಂದು ಭರತ್ ಶೆಟ್ಟಿ ಟೀಕಿಸಿದ್ದಾರೆ.

ಕೇಸು ವಾಪಸ್ ಪಡೆಯಲು ಆಗ್ರಹ
ಕಾಂಗ್ರೆಸ್ ಸರ್ಕಾರದ ಹಿಂದು ವಿರೋಧಿ ನೀತಿ ಮುಂದುವರಿಸಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮುಸ್ಲಿಂ ಸಮಾಜದ ಮಹಿಳೆಯರಿಗೆ ಆದ ಅನ್ಯಾಯ ಹಾಗೂ ಮೋದಿ ಸರ್ಕಾರ ತ್ರಿವಳಿ ತಲಾಕ್ ನಿಷೇಧ ಮಾಡಿದ ಬಗ್ಗೆ ಡಾ.ಭಟ್ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಇದೇ ಹೇಳಿಕೆಯನ್ನು ತಿರುಚಿ ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ಕೇಸು ದಾಖಲಿಸಲಾಗಿದೆ. ಸಿದ್ದರಾಮಯ್ಯ ಸರ್ಕಾರದ ಈ ಷಡ್ಯಂತ್ರವನ್ನು ಸಹಿಸಲು ಸಾಧ್ಯವಿಲ್ಲ. ಡಾ.ಪ್ರಭಾಕರ ಭಟ್ ವಿರುದ್ಧ ಹಾಕಿರುವ ಸುಳ್ಳು ಕೇಸನ್ನು ತಕ್ಷಣ ವಾಪಸು ಪಡೆಯಬೇಕೆಂದು ಸಂಸದರು ಆಗ್ರಹಿಸಿದ್ದಾರೆ.
Case against Kalladka Prabhakar Bhat, Muslims are using girls to file case says MLA Dr Bharath shetty.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm