ಬ್ರೇಕಿಂಗ್ ನ್ಯೂಸ್
28-12-23 06:42 pm Mangalore Correspondent ಕರಾವಳಿ
ಮಂಗಳೂರು, ಡಿ.28 : ಪ್ರವಾಸಿ ತಾಣ ಪಣಂಬೂರು ಕಡಲತೀರದಲ್ಲಿ ಹೊಸತಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ಲೋಕಾರ್ಪಣೆ ಮಾಡಲಾಗಿದ್ದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಪಣಂಬೂರು ಕಡಲತೀರಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದೀಗ ತೇಲುವ ಸೇತುವೆ ಹೊಸ ಆಕರ್ಷಣೆಯಾಗಿದ್ದು ಜನಾಕರ್ಷಣೆ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೊದಲ ತೇಲುವ ಸೇತುವೆಯಾಗಿದ್ದು, ಇದಕ್ಕೂ ಹಿಂದೆ ಉಡುಪಿಯ ಮಲ್ಪೆ ಮತ್ತು ಕಾರವಾರ ಕಡಲತೀರದಲ್ಲಿ ತೇಲುವ ಸೇತುವೆ ನಿರ್ಮಿಸಲಾಗಿದೆ.



ಕದಳೀ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ವತಿಯಿಂದ 125 ಮೀಟರ್ ಉದ್ದದ ಸೇತುವೆಯನ್ನು ನಿರ್ಮಿಸಲಾಗಿದೆ. ಸಮುದ್ರದ ಅಲೆಗಳ ಮೇಲೆ ಹರಡಿರುವ ತೇಲುವ ಸೇತುವೆಯಲ್ಲಿ ಲೈಫ್ ಜಾಕೆಟ್ ಹಾಕ್ಕೊಂಡು ಪ್ರವಾಸಿಗರು ವಿಶೇಷ ಅನುಭವ ಪಡೆಯುತ್ತಿದ್ದಾರೆ.



ಪ್ರವಾಸಿಗರ ಸುರಕ್ಷತೆಗಾಗಿ 12 ಮಂದಿ ಜೀವ ರಕ್ಷಕರು ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತೇಲುವ ಸೇತುವೆಯಲ್ಲಿ ನಿಂತು ಗರಿಷ್ಠ 50 ಜನರು ಸೂರ್ಯಾಸ್ತವನ್ನು ವೀಕ್ಷಿಸಬಹುದಾಗಿದೆ. ಉದ್ಘಾಟನೆ ಬಳಿಕ ಮಾತನಾಡಿದ ಖಾದರ್, ಬೀಚ್ ಟೂರಿಸಂ ಅಭಿವೃದ್ಧಿಗೆ ಆದ್ಯತೆ ನೀಡಲು ಪ್ರವಾಸೋದ್ಯಮ ಸಚಿವ ಎಚ್ಕೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದರು.


ಇದಲ್ಲದೆ, ಜೆಟ್ ಸ್ಕೀ, ಬೋಟಿಂಗ್ ಇನ್ನಿತರ ಸಾಹಸ ಕ್ರೀಡೆಗಳನ್ನು ಕೂಡ ಬೀಚ್ ನಲ್ಲಿ ಏರ್ಪಡಿಸಲಾಗಿದೆ. ಸದ್ಯದಲ್ಲೇ ಸ್ಕೂಬಾ ಡೈವಿಂಗ್ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಸೂಕ್ತ ಜಾಗಕ್ಕಾಗಿ ಅಧ್ಯಯನ ಮಾಡುತ್ತಿದ್ದು ಕೆಲವು ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ಬೀಚ್ ಅಭಿವೃದ್ಧಿ ಸಮಿತಿಯ ಡಾ.ರಾಜೇಶ್ ಹುಕ್ಕೇರಿ ಹೇಳಿದರು. ಇನ್ನೊಬ್ಬ ಪಾಲುದಾರ ಲಕ್ಷ್ಮೀಶ ಭಂಡಾರಿ ಉಪಸ್ಥಿತರಿದ್ದರು.
The newly constructed floating bridge at Panambur beach was inaugurated by State Assembly Speaker U.T. Khader has officially inaugurated it.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm