ಬ್ರೇಕಿಂಗ್ ನ್ಯೂಸ್
28-12-23 10:10 pm Mangalore Correspondent ಕರಾವಳಿ
ಮಂಗಳೂರು, ಡಿ.28: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಏರ್ಪೋರ್ಟ್ ಪರಿಸರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಡಿ.26ರಂದು ರಾತ್ರಿ 12 ಗಂಟೆ ವೇಳೆಗೆ ಇಮೇಲ್ ಸಂದೇಶ ಬಂದಿದೆ. ಮಂಗಳೂರು ಸೇರಿದಂತೆ ದೇಶದ ಬೇರೆ ಕೆಲವು ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಸಂದೇಶ ಬಂದಿದೆ. ಮರುದಿನ ಡಿ.27ರಂದು ಬೆಳಗ್ಗೆ 11 ಗಂಟೆಗೆ ಈ ಬಗ್ಗೆ ಮಾಹಿತಿ ತಿಳಿದ ಏರ್ಪೋರ್ಟ್ ಸಿಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಮೇಲ್ ಸಂದೇಶದಲ್ಲಿ, ನಾವು ಫ್ಯೂನಿಂಗ್ ಎನ್ನುವ ಉಗ್ರವಾದಿ ಸಂಘಟನೆಯವರಾಗಿದ್ದು, ನಿಮ್ಮಲ್ಲಿಗೆ ಬರುತ್ತಿರುವ ವಿಮಾನ ಒಂದರಲ್ಲಿ ಬಾಂಬ್ ಇಟ್ಟಿದ್ದೇವೆ. ಆ ಬಾಂಬ್ ನಿಮ್ಮ ಏರ್ಪೋರ್ಟ್ ಒಳಗಡೆಯೂ ಇದ್ದಿರಬಹುದು. ಬಾಂಬನ್ನು ಗುಪ್ತ ಜಾಗದಲ್ಲಿ ಇಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ಅದು ಬ್ಲಾಸ್ಟ್ ಆಗಲಿದೆ. ನಿಮ್ಮನ್ನೆಲ್ಲ ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ವಿಷಯ ತಿಳಿಯುತ್ತಲೇ ಏರ್ಪೋರ್ಟ್ ಮತ್ತು ಪರಿಸರದಲ್ಲಿ ತಪಾಸಣೆ ನಡೆಸಲಾಗಿದೆ. ಹೆಚ್ಚುವರಿ ತಪಾಸಣೆ ಮಾಡಲು ಚೆಕ್ ಪೋಸ್ಟ್ ಹಾಕಲಾಗಿದೆ. ಬಜ್ಪೆ ಠಾಣೆ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಏರ್ಪೋರ್ಟ್ ಹಿರಿಯಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿದ ದೂರಿನಂತೆ ಬಜ್ಪೆ ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
Bomb threat at Mangalore international Airport by Email, security tightened. On 26/12/2023 at 2359 Hrs, an email was received at multiple airports, including Mangalore Airport with respect to threat of Bomb. Email received from - [email protected] There are explosives inside of one of your planes. But also inside of your airport.The explosives are well hidden, and they will go off in a few hours. I will kill you all. WE ARE A TERRORIST GROUP CALLED; "Funing".
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm