ಬ್ರೇಕಿಂಗ್ ನ್ಯೂಸ್
29-12-23 04:25 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಓರ್ವ ಯುವಕ ಮೃತಪಟ್ಟರೆ, ಮತ್ತೋರ್ವ ಸಮುದ್ರ ಪಾಲಾಗಿದ್ದು , ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ನಿವಾಸಿ ಸಲ್ಮಾನ್(19) ಮೃತಪಟ್ಟ ಯುವಕನಾಗಿದ್ದು , ಆತನ ಸಂಬಂಧಿ ಬಶೀರ್(23) ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ.

ಸಾವಿನ ದವಡೆಯಿಂದ ಪಾರಾದ ಯುವಕ ಸೈಫ್ ಅಲಿ
ಚಿಕ್ಕಮಗಳೂರು ಮೂಲದ ಬಶೀರ್, ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್, ಸೈಫ್ ಆಲಿ ನೀರಾಟಕ್ಕಿಳಿದಿದ್ದು ಸಮುದ್ರದ ರಕ್ಕಸ ಅಲೆಗಳು ಮೂವರನ್ನೂ ಎಳೆದೊಯ್ದಿದೆ.

ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರುಪಾಲಾಗಿರುವ ಬಶೀರ್ ಅವರ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
Two drowned at Beach in Ullal at Mangalore, two dead, one saved. The two have said to come from Chikmagaluru.They had come to visit ullal dargah
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm