ಬ್ರೇಕಿಂಗ್ ನ್ಯೂಸ್
29-12-23 09:20 pm Mangalore Correspondent ಕರಾವಳಿ
ಮಂಗಳೂರು, ಡಿ.29: ರಾಮ ಭಾರತೀಯರಿಗೆ ಎಲ್ಲರಿಗೂ ಸೇರಿದವನು. ರಾಮನ ಮಂದಿರಕ್ಕೆ ಯಾರಿಗೆ ಬರಬೇಕು ಅಂತ ಅಪೇಕ್ಷೆ ಇದೆಯೋ ಅವರೆಲ್ಲ ಬರಬಹುದು. ಆಹ್ವಾನ ಇಲ್ಲದೆಯೂ ರಾಮ ಮಂದಿರಕ್ಕೆ ಬರಬಹುದು. ಆಹ್ವಾನ ತಿರಸ್ಕಾರ ಮಾಡೋದು ಅವರವರಿಗೆ ಬಿಟ್ಟದ್ದು, ವ್ಯಕ್ತಿಗತವಾದ್ದು ಎಂದು ಎಡ ಪಕ್ಷಗಳ ಟೀಕೆಯ ಬಗ್ಗೆ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಅವರನ್ನು ಕರೆದಿಲ್ಲ ಅಂತಾದ್ರೆ ಕರೆದಿಲ್ಲ ಎನ್ನೋದೇ ದೊಡ್ಡ ಆಕ್ಷೇಪ. ಕರೆದ ಮೇಲೆ ನಾವು ತಿರಸ್ಕರಿಸುತ್ತೇವೆ ಎನ್ನೋದೇ ದೊಡ್ಡ ಹೆಗ್ಗಳಿಕೆ ಅನ್ಕೊಂಡಿದ್ದಾರೆ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ. ರಾಜಕೀಯ ಟೀಕೆಗಳಿಗೆ ಉತ್ತರ ಕೊಡೋದಿಲ್ಲ.
ಆಹ್ವಾನ ನೀಡುವಲ್ಲಿ ತಾರತಮ್ಯ ಎಂಬ ಟೀಕೆಗೆ ಉತ್ತರಿಸಿದ ಸ್ವಾಮೀಜಿ, ಅಲ್ಲಿರುವ ಸ್ಥಳಾವಕಾಶ ಅಲ್ಪವಾದದ್ದು. ಅಬ್ಬಬ್ಬಾ ಅಂದ್ರೆ ಏಳೆಂಟು ಸಾವಿರ ಜನ ಸೇರಬಹುದು. ಲೋಕದಲ್ಲಿ ಮಹಾತ್ಮರು, ಗೌರವಾನಿತ್ವರು ತುಂಬಾ ಮಂದಿ ಇದ್ದಾರೆ. ಯಾರನ್ನು ಕರೆದರೂ ಆಕ್ಷೇಪ ಇರುವಂತಹದ್ದೇ. ಅಲ್ಲಿನ ಪರಿಸ್ಥಿತಿ, ಅವಕಾಶವನ್ನು ಗಮನಿಸಿಕೊಂಡು ಸಮಾಧಾನಪಡಬೇಕು.
ಪ್ರಾತಿನಿಧ್ಯ ಆಧರಿಸಿ ಆಹ್ವಾನವನ್ನು ನೀಡಿದ್ದೇವೆ. ಆಹ್ವಾನ ನೀಡದಿರುವ ಬಗ್ಗೆ ಮಂದಿರ, ಟ್ರಸ್ಟ್, ವ್ಯಕ್ತಿಗೆ ಸ್ವಾರ್ಥ, ಲಾಭ ಯಾವುದೂ ಇಲ್ಲ. ಇದು ಮನುಷ್ಯ ಸಹಜವಾದ ಪ್ರಕ್ರಿಯೆ. ಎಲ್ಲರನ್ನೂ ಸಮಾಧಾನಪಡಿಸಲು ಸಾಧ್ಯವಿಲ್ಲ. ಎಲ್ಲರೂ ಈ ವಿಚಾರವನ್ನು ಗಮನದಲ್ಲಿಟ್ಟು ಶಾಂತರಾಗಬೇಕು ಎಂದರು.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾದ ಪ್ರಶ್ನೆಗೆ, ಒಬ್ಬರ ಕಡೆಯಿಂದ ಏನೂ ತಪ್ಪು ಆಗದಿದ್ದರೂ ತಪ್ಪು ಎಂದು ಭಾರೀ ಪ್ರತಿಭಟನೆ. ಇನ್ನೊಂದು ಕಡೆಯಿಂದ ಏನು ತಪ್ಪು ಆದರೂ ಕಣ್ಮುಚ್ಚಿ, ಬಾಯಿಮಚ್ಚಿ ಇರೋದು. ಇಂತಹ ನಡೆ ಸರಿಯಲ್ಲ. ಅವರ ಹೇಳಿಕೆ ವ್ಯಕ್ತಿಗತವಾಗಿರೋದು. ನಾನು ಆ ಬಗ್ಗೆ ಯಾವುದೇ ಅಭಿಪ್ರಾಯ ಕೊಡೋದು ಸರಿಯಲ್ಲ ಎಂದು ಹೇಳಿದರು. ಖಾಸಗಿ ಕಾರ್ಯಕ್ರಮಕ್ಕೆ ಮಂಗಳೂರಿಗೆ ಆಗಮಿಸಿದ್ದ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾಧ್ಯಮದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
Lord Ram belongs to all Indians. Those who want to come to the Ram temple can come. You can come to ram temple even without an invitation. Pejawar Vishwaprasanna Theertha Swamiji reacted to the left's criticism that it was up to him to reject the invitation and it was personal.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm