ಬ್ರೇಕಿಂಗ್ ನ್ಯೂಸ್
02-01-24 04:47 pm Mangalore Correspondent ಕರಾವಳಿ
ಮಂಗಳೂರು, ಜ.2: ಸಿದ್ದರಾಮಯ್ಯ ಅವರೇ ನಮ್ಮ ರಾಮ, ಅಯೋಧ್ಯೆಯದ್ದು ಬಿಜೆಪಿ ರಾಮ ಎಂಬ ಮಾಜಿ ಸಚಿವ ಆಂಜನೇಯ ವಿವಾದಾತ್ಮಕ ಹೇಳಿಕೆ ಬಗ್ಗೆ ಕೆಪಿಸಿಸಿ ಉಪಾಧ್ಯಕ್ಷ ಕೆ.ಆರ್ ಸುದರ್ಶನ್ ಪ್ರತಿಕ್ರಿಯಿಸಿದ್ದು ಆಂಜನೇಯರದ್ದು ವೈಯಕ್ತಿಕ ಹೇಳಿಕೆ. ಅದು ಪಕ್ಷದ ನಿಲುವಲ್ಲ. ಸಿದ್ದರಾಮಯ್ಯ ಮೇಲಿನ ಅಭಿಮಾನದಿಂದ ಹಾಗೆ ಹೇಳಿರಬಹುದು ಎಂದಿದ್ದಾರೆ.
ಅವರ ಅಭಿಪ್ರಾಯ ಪಕ್ಷದ ಅಭಿಪ್ರಾಯ ಆಗಲ್ಲ. ಆದರೆ ಸಿದ್ದರಾಮಯ್ಯ ಒಬ್ಬ ಜನನಾಯಕ. ಕೆಲವರು ಅವರನ್ನು ನೋಡುವ ದೃಷ್ಟಿಕೋನ ಬೇರೆ ಇರುತ್ತೆ. ಆ ಕಾರಣದಿಂದ ಆಂಜನೇಯ, ಸಿದ್ದರಾಮಯ್ಯರನ್ನೇ ರಾಮ ಎಂದು ಹೇಳಿರಬಹುದು ಎಂದು ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಅಯೋಧ್ಯೆ ಹೋರಾಟದ ಕೇಸ್ ರೀ ಓಪನ್ ಕುರಿತಾಗಿ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸುದರ್ಶನ್, ಅಶೋಕ ಅವರು ಹೋಮ್ ಮಿನಿಸ್ಟರ್ ಆಗಿದ್ದಾಗ ಕಡ್ಲೆಕಾಯಿ ತಿಂತಿದ್ರಾ? ಇವರ್ಯಾಕೆ ಅಧಿಕಾರದಲ್ಲಿದ್ದಾಗ ಆ ಕೇಸ್ ಗಳನ್ನ ವಾಪಸ್ ತಗೊಂಡಿಲ್ಲ. ಬಿಜೆಪಿ ನಾಯಕರಿಗೆ ಜವಾಬ್ದಾರಿ ಇರಲಿಲ್ವಾ? ಎರಡು ಸಲ ರಾಜ್ಯದಲ್ಲಿ ಸರ್ಕಾರ ಮಾಡಿಲ್ವಾ? ರಾಜಕಾರಣಕ್ಕೆ ಮಾತ್ರ ಅಯೋಧ್ಯೆ ವಿಚಾರ ಬೇಕು ಇವರಿಗೆ. ಈ ಘಟನೆಯನ್ನು ರಾಜಕೀಯವಾಗಿ ನೋಡುವ ಅಗತ್ಯವಿಲ್ಲ ಎಂದರು.
ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸದ ಬಗ್ಗೆ ಮುಸ್ಲಿಮರ ಆಕ್ರೋಶದ ಕುರಿತ ಪ್ರಶ್ನೆಗೆ, ಸರ್ಕಾರ ನಿಯಮಾನುಸಾರ ಕೆಲಸ ಮಾಡ ಬೇಕಾಗುತ್ತದೆ. ರಾಜಕೀಯ ದುರುದ್ದೇಶಕ್ಕಾಗಿ ಕೆಲಸ ಮಾಡಲ್ಲ. ಕಾನೂನು ಪ್ರಕಾರ ಏನು ಆಗಬೇಕು ಅದನ್ನು ಸರಕಾರ ಮಾಡಿದೆ. ಬಂಧಿಸಬೇಕು ಎನ್ನುವ ಕಾರಣಕ್ಕೆ ಬಂಧಿಸಲೇಬೇಕು ಅನ್ನುವುದಲ್ಲ. ಹಿಂದಿನ ಬಿಜೆಪಿ ಸರಕಾರದ ದುರಾಡಳಿತದಿಂದ ಜನ ಬದಲಾವಣೆ ಬಯಸಿ ಈ ಬಾರಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಹಿಂದಿನ ಸರಕಾರದ ಆಡಳಿತದಲ್ಲಿ ಅಭಿವೃದ್ಧಿ ಕುಸಿದಿತ್ತು. ದುರಾಡಳಿತದ ವಿರುದ್ಧ ಕಾಂಗ್ರೆಸಿನ ನಿರಂತರ ಹೋರಾಟದ ಪರಿಣಾಮ ಕೈ ಬಗ್ಗೆ ಜನರ ನಿರೀಕ್ಷೆಯಿಂದಾಗಿ ಹೆಚ್ಚಿನ ಸ್ಥಾನ ನೀಡಿದ್ದಾರೆ.
ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಅನುಷ್ಠಾನ ಮಾಡಲಾಗಿದೆ. ಪ್ರಾಮಾಣಿಕವಾಗಿ ಅನುಷ್ಠಾನ ಮಾಡಿದ್ದೇವೆ, ಜಾತಿ ಧರ್ಮ ಸೀಮಿತವಾಗಿ ಮಾಡಿಲ್ಲ. ಈ ಬಾರಿ ಬರಗಾಲದಿಂದ ಜನರು ತತ್ತರಿಸಿದ್ದಾರೆ. ಬರಗಾಲ ಪರಿಣಾಮ ಬೀರಿದ ಸಂದರ್ಭ ಗ್ಯಾರಂಟಿ ಬಡವರ ಬದುಕಿಗೆ ಆಸರೆಯಾಗಿತ್ತು. ಗ್ಯಾರಂಟಿಯಿಂದಾಗಿ ಹಾಹಾಕಾರ ಕಡಿಮೆ ಆಗಿದೆ ಎಂದು ಹೇಳಿದರು.
Reacting to former minister Anjaneya's controversial statement that Siddaramaiah is our Ram and Ayodhya is BJP's Rama, KPCC vice-president K R Sudarshan said, "Anjaneya's statement is a personal statement.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm