ಬ್ರೇಕಿಂಗ್ ನ್ಯೂಸ್
03-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.3: ಹುಬ್ಬಳ್ಳಿಯಲ್ಲಿ 31 ವರ್ಷ ಹಳೆಯ ಪ್ರಕರಣದಲ್ಲಿ ಹಿಂದು ಸಂಘಟನೆ ಕಾರ್ಯಕರ್ತನನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಕಾಂಗ್ರೆಸಿನವರಿಗೆ ರಾಮ ಮಂದಿರ ನಿರ್ಮಾಣ ಆಗಲೇಬಾರದು ಎಂಬ ಭಾವನೆಯಿದೆ. ಹಾಗಾಗಿ 31 ವರ್ಷಗಳ ಹಿಂದಿನ ಪ್ರಕರಣದಲ್ಲಿ ಆರೋಪಿಯಾದವರನ್ನು ಬಂಧಿಸಿ. ರಾಮನ ಮಂದಿರ ಸಹಿಸಲಾರದೆ ಸಿದ್ದರಾಮಯ್ಯ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ.
ಹಿಂದೆ ಸಿದ್ದರಾಮಯ್ಯ ಅವರೇ ಪಿಎಫ್ಐ ಕಾರ್ಯಕರ್ತರ ಪ್ರಕರಣ ರದ್ದುಪಡಿಸಿ ಜೈಲಿನಿಂದ ಅವರನ್ನು ಹೊರಗೆ ಬಿಡಿಸಿದ್ದರು. ಉನ್ನತ ಪೊಲೀಸ್ ಅಧಿಕಾರಿಗಳು ರಿಲೀಸ್ ಮಾಡಬೇಡಿ ಎಂದಿದ್ದರೂ ಸಿದ್ದರಾಮಯ್ಯ ರಿಲೀಸ್ ಮಾಡಿದ್ದರು. ಅಯೋಧ್ಯೆಯಲ್ಲಿ ದೇಶದ ಜನ ಹೆಮ್ಮೆ ಪಡುವ ರೀತಿ ರಾಮನ ಮಂದಿರ ಆಗುತ್ತಿದ್ದರೆ, ಇತ್ತ ಕಾಂಗ್ರೆಸಿಗರು ವಿಷ ಕಾರುತ್ತಿದ್ದಾರೆ. 1992ರ ಗಲಭೆ ಪ್ರಕರಣ ಹೊರತೆಗೆದು ಆರೋಪಿಗಳನ್ನು ಬಂಧಸಲು ಆರಂಭಿಸಿದ್ದಾರೆ. ಬಿಕೆ ಹರಿಪ್ರಸಾದ್ ಹಿರಿಯ ನಾಯಕರಾಗಿದ್ದು ದೇಶದಲ್ಲಿ ಗೋಧ್ರಾ ಮಾದರಿ ಹತ್ಯಾಕಾಂಡ ಆಗುತ್ತೆ ಎಂದಿದ್ದಾರೆ. ಆಮೂಲಕ ಕಾಂಗ್ರೆಸ್ ಒಳಗೊಳಗೆ ಮಾಡಿಸುತ್ತಿರುವ ಸಂಚನ್ನು ಹೊರಗೆ ಹೇಳಿದ್ದಾರೆ. ಇದೆಲ್ಲ ನೋಡಿದರೆ, ದೇಶದಲ್ಲಿ ರಾಮನ ಮಂದಿರ ಉದ್ಘಾಟನೆ ಸಂದರ್ಭದಲ್ಲೇ ಮತ್ತೆ ಗಲಭೆ ಎಬ್ಬಿಸಲು ಸಂಚು ನಡೆಸಿರುವಂತೆ ತೋರುತ್ತಿದೆ ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ, ಕಸ್ತೂರಿ ಪಂಜ, ಹರಿಕೃಷ್ಣ ಬಂಟ್ವಾಳ, ಜಗದೀಶ ಶೇಣವ ಮೊದಲಾದವರು ಪಾಲ್ಗೊಂಡಿದ್ದರು.
Congress is trying to create only riots in the name of Ram Mandir slams MLA Bharath Shetty.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm