ಬ್ರೇಕಿಂಗ್ ನ್ಯೂಸ್
03-01-24 09:48 pm Mangalore Correspondent ಕರಾವಳಿ
ಮಂಗಳೂರು, ಜ.3: ಶ್ರೀರಾಮ ಜನ್ಮಭೂಮಿ ಆಂದೋಲನ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳ ನೆಪದಲ್ಲಿ ರಾಮನ ಭಕ್ತರನ್ನು ಬಂಧಿಸಿ ಹಿಂಸಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 70-80 ವಯಸ್ಸಿನವರನ್ನು ಈಗ ಬಂಧಿಸಿ ಜೈಲಿಗಟ್ಟುವ ಅಗತ್ಯವೇನು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹಳೆ ಕೇಸುಗಳಿಗೆ ಜೀವ ಕೊಡುತ್ತಿದೆ. 30-35 ವರ್ಷಗಳಷ್ಟು ಹಳೆಯ ಪ್ರಕರಣಗಳು, ಅದರಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇದ್ದವರು 70 ರಿಂದ 80 ವರ್ಷದೊಳಗಿದ್ದಾರೆ. ಅಂಥವರನ್ನು ವಾರೆಂಟ್ ಇದೆಯೆಂದು ಹೇಳಿ ಪ್ರಕರಣವನ್ನು ಮರುತನಿಖೆ ನಡೆಸುತ್ತಿದ್ದು ಆಮೂಲಕ ರಾಮಭಕ್ತರನ್ನು ಹಿಂಸಿಸುತ್ತಿದ್ದಾರೆ.

ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಹೆಚ್ಚಿನವು ಬೋಗಸ್ ಆಗಿದ್ದರಿಂದ ಹಿಂದಿನ ಕೆಲವು ಸರ್ಕಾರಗಳು ಅವುಗಳನ್ನು ರದ್ದುಗೊಳಿಸಿದ್ದವು. ಇಂದು, ಆ ಕೇಸನ್ನು ಮರುತನಿಖೆ ನಡೆಸಲು ಆದೇಶಿಸಿ ಬದುಕುಳಿದ ಆ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದು ಖಂಡನೀಯ. ಈ ಎಲ್ಲ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ ಧೋರಣೆಯನ್ನು ತೋರಿಸುತ್ತಿದೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಮತ್ತು ಯಾವುದೇ ಕಾರಣಕ್ಕೂ ರಾಮಭಕ್ತರನ್ನು ಬಂಧಿಸಬಾರದು ಎಂದು ಆಗ್ರಹಿಸುತ್ತೇನೆ. ಮರು ತನಿಖೆ ಹೆಸರಿನಲ್ಲಿ ರಾಮ ಭಕ್ತರನ್ನು ಬಂಧಿಸಿದರೆ ಇದಕ್ಕೆ ಕರ್ನಾಟಕ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Srikanath Poojari arrest, Vishwa Hindu parishad in Mangalore say Ram Bhakts have been targeted.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm