ಬ್ರೇಕಿಂಗ್ ನ್ಯೂಸ್
06-01-24 03:40 pm Mangalore Correspondent ಕರಾವಳಿ
ಮಂಗಳೂರು, ಜ.6: ಕಾಂತಾರ ಚಿತ್ರದ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗುರುಪುರ ವಜ್ರದೇಹಿ ಮಠದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಆಗಮಿಸಿದ್ದು, ಮೈಸಂದಾಯ ಮತ್ತು ಅಣ್ಣಪ್ಪ ಪಂಜುರ್ಲಿ ದೈವದ ಕೋಲದಲ್ಲಿ ಕಾಣಿಸಿಕೊಂಡಿದ್ದಾರೆ.
ನಿನ್ನೆ ರಾತ್ರಿ 12 ವೇಳೆಗೆ ಮೈಸಂದಾಯ ದೈವದ ಕೋಲ ನಡೆದಿದ್ದು, ಆ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಜೊತೆಗೆ ಕಾಂತಾರ ಎರಡನೇ ಭಾಗದ ಚಿತ್ರೀಕರಣದ ಸಲುವಾಗಿ ದೈವದ ಅನುವು ಕೇಳಿದ್ದಾರೆ. ದೈವವು ರಿಷಬ್ ಶೆಟ್ಟಿ ಕೇಳಿಕೊಂಡ ಮಾತಿಗೆ ಅನುವು ನೀಡಿದಂತೆ ಬೆನ್ನು ತಟ್ಟಿ ಆಶೀರ್ವದಿಸಿದ ವಿಡಿಯೋ ವೈರಲ್ ಆಗಿದೆ. ಹೀಗಾಗಿ ದೈವ ಕಾಂತಾರದ ಚಿತ್ರಕ್ಕಾಗಿ ಅಭಯ ನೀಡಿದೆಯೆಂದು ಹೇಳಲಾಗುತ್ತಿದೆ.


ಆನಂತರ, ನಸುಕಿನ ವೇಳೆಗೆ ಅಣ್ಣಪ್ಪ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿಯೂ ರಿಷಬ್ ಶೆಟ್ಟಿ ಬಂದು ದೈವದಲ್ಲಿ ಕಾಂತಾರದ ಚಿತ್ರಕ್ಕಾಗಿ ಬೇಡಿಕೊಂಡಿದ್ದಾರೆ. ಕಾಂತಾರ ಚಿತ್ರದ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ರಿಷಬ್ ಶೆಟ್ಟಿ ಅದರ ನಡುವಲ್ಲೇ ಕೋಲಕ್ಕೆ ಬಂದು ಬೇಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರದ ಕಾರಣದಿಂದಲೇ ದೈವಾರಾಧನಗೆ ಅಪಚಾರ ಆಗಿದೆಯೆಂದು ಜಾಲತಾಣದಲ್ಲಿ ಟೀಕೆ ಬಂದಿತ್ತು. ಬೆಂಗಳೂರು, ಮಂಡ್ಯದಲ್ಲಿ ದೈವದ ಆವೇಶ, ಕೊರಗಜ್ಜನ ಕೋಲದಲ್ಲಿ ವಿಕೃತ ನಡವಳಿಕೆಯ ವಿಡಿಯೋ ವೈರಲ್ ಆಗಿದ್ದಕ್ಕೆ ದೈವಾರಾಧಕರು ಭಾರೀ ಟೀಕೆಯನ್ನೂ ಮಾಡಿದ್ದರು. ಇದೆಲ್ಲ ಕಾಂತಾರ ಚಿತ್ರದ ಬಳಿಕವೇ ಆಗಿರುವುದು ಎನ್ನುವ ಟೀಕೆ ವ್ಯಕ್ತವಾಗಿತ್ತು.
ಎರಡನೇ ಭಾಗದಲ್ಲಿ ದೈವದ ಕುರಿತಾಗಿ ಸಿನಿಮಾ ಮಾಡಬಾರದೆಂದು ರಿಷಬ್ ಶೆಟ್ಟಿ ಬಗ್ಗೆ ಟೀಕೆಯನ್ನೂ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವತಃ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿ ಬಂದು ಸಿನಿಮಾ ಚಿತ್ರೀಕರಣಕ್ಕಾಗಿ ಬೇಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಯಾವ ರೀತಿಯ ಬೇಡಿಕೆಯನ್ನು ದೈವದ ಮುಂದಿರಿಸಿದ್ದರು, ದೈವ ಯಾವ ರೀತಿಯ ಆಶೀರ್ವಾದ ನೀಡಿದೆ ಎನ್ನುವ ಬಗ್ಗೆ ತಿಳಿಯಲು ಗುರುಪುರ ಸ್ವಾಮೀಜಿ ಸಂಪರ್ಕಕ್ಕೆ ಸಿಕ್ಕಿಲ್ಲ.
Kantara actor Rishab Shetty visits Gurupura Math Rajashekharananda swamiji in Mangalore.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm