ಬ್ರೇಕಿಂಗ್ ನ್ಯೂಸ್
06-01-24 03:40 pm Mangalore Correspondent ಕರಾವಳಿ
ಮಂಗಳೂರು, ಜ.6: ಕಾಂತಾರ ಚಿತ್ರದ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಗುರುಪುರ ವಜ್ರದೇಹಿ ಮಠದ ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಆಗಮಿಸಿದ್ದು, ಮೈಸಂದಾಯ ಮತ್ತು ಅಣ್ಣಪ್ಪ ಪಂಜುರ್ಲಿ ದೈವದ ಕೋಲದಲ್ಲಿ ಕಾಣಿಸಿಕೊಂಡಿದ್ದಾರೆ.
ನಿನ್ನೆ ರಾತ್ರಿ 12 ವೇಳೆಗೆ ಮೈಸಂದಾಯ ದೈವದ ಕೋಲ ನಡೆದಿದ್ದು, ಆ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಜೊತೆಗೆ ಕಾಂತಾರ ಎರಡನೇ ಭಾಗದ ಚಿತ್ರೀಕರಣದ ಸಲುವಾಗಿ ದೈವದ ಅನುವು ಕೇಳಿದ್ದಾರೆ. ದೈವವು ರಿಷಬ್ ಶೆಟ್ಟಿ ಕೇಳಿಕೊಂಡ ಮಾತಿಗೆ ಅನುವು ನೀಡಿದಂತೆ ಬೆನ್ನು ತಟ್ಟಿ ಆಶೀರ್ವದಿಸಿದ ವಿಡಿಯೋ ವೈರಲ್ ಆಗಿದೆ. ಹೀಗಾಗಿ ದೈವ ಕಾಂತಾರದ ಚಿತ್ರಕ್ಕಾಗಿ ಅಭಯ ನೀಡಿದೆಯೆಂದು ಹೇಳಲಾಗುತ್ತಿದೆ.
ಆನಂತರ, ನಸುಕಿನ ವೇಳೆಗೆ ಅಣ್ಣಪ್ಪ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿಯೂ ರಿಷಬ್ ಶೆಟ್ಟಿ ಬಂದು ದೈವದಲ್ಲಿ ಕಾಂತಾರದ ಚಿತ್ರಕ್ಕಾಗಿ ಬೇಡಿಕೊಂಡಿದ್ದಾರೆ. ಕಾಂತಾರ ಚಿತ್ರದ ಎರಡನೇ ಭಾಗದ ಚಿತ್ರೀಕರಣದಲ್ಲಿ ಬಿಝಿಯಾಗಿರುವ ರಿಷಬ್ ಶೆಟ್ಟಿ ಅದರ ನಡುವಲ್ಲೇ ಕೋಲಕ್ಕೆ ಬಂದು ಬೇಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರದ ಕಾರಣದಿಂದಲೇ ದೈವಾರಾಧನಗೆ ಅಪಚಾರ ಆಗಿದೆಯೆಂದು ಜಾಲತಾಣದಲ್ಲಿ ಟೀಕೆ ಬಂದಿತ್ತು. ಬೆಂಗಳೂರು, ಮಂಡ್ಯದಲ್ಲಿ ದೈವದ ಆವೇಶ, ಕೊರಗಜ್ಜನ ಕೋಲದಲ್ಲಿ ವಿಕೃತ ನಡವಳಿಕೆಯ ವಿಡಿಯೋ ವೈರಲ್ ಆಗಿದ್ದಕ್ಕೆ ದೈವಾರಾಧಕರು ಭಾರೀ ಟೀಕೆಯನ್ನೂ ಮಾಡಿದ್ದರು. ಇದೆಲ್ಲ ಕಾಂತಾರ ಚಿತ್ರದ ಬಳಿಕವೇ ಆಗಿರುವುದು ಎನ್ನುವ ಟೀಕೆ ವ್ಯಕ್ತವಾಗಿತ್ತು.
ಎರಡನೇ ಭಾಗದಲ್ಲಿ ದೈವದ ಕುರಿತಾಗಿ ಸಿನಿಮಾ ಮಾಡಬಾರದೆಂದು ರಿಷಬ್ ಶೆಟ್ಟಿ ಬಗ್ಗೆ ಟೀಕೆಯನ್ನೂ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವತಃ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ಕೋಲದ ಸಂದರ್ಭದಲ್ಲಿ ಬಂದು ಸಿನಿಮಾ ಚಿತ್ರೀಕರಣಕ್ಕಾಗಿ ಬೇಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಯಾವ ರೀತಿಯ ಬೇಡಿಕೆಯನ್ನು ದೈವದ ಮುಂದಿರಿಸಿದ್ದರು, ದೈವ ಯಾವ ರೀತಿಯ ಆಶೀರ್ವಾದ ನೀಡಿದೆ ಎನ್ನುವ ಬಗ್ಗೆ ತಿಳಿಯಲು ಗುರುಪುರ ಸ್ವಾಮೀಜಿ ಸಂಪರ್ಕಕ್ಕೆ ಸಿಕ್ಕಿಲ್ಲ.
Kantara actor Rishab Shetty visits Gurupura Math Rajashekharananda swamiji in Mangalore.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm