ಬ್ರೇಕಿಂಗ್ ನ್ಯೂಸ್
07-01-24 04:52 pm Mangalore Correspondent ಕರಾವಳಿ
ಪುತ್ತೂರು, ಜ.7: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಕುರಿತಾಗಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದು, ಮಧ್ಯರಾತ್ರಿ ಮಾನಸಿಕ ಅಸ್ವಸ್ಥ ವ್ಯಕ್ತಿ ಎಸಗಿರುವ ಕೃತ್ಯ ಎಂದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.
ಜ.5ರಂದು ರಾತ್ರಿ ವೇಳೆ ಬ್ಯಾನರನ್ನು ಹರಿದು ಹಾಕಿದ ಬಗ್ಗೆ ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು ಸುಳ್ಯ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದರು. ಶ್ರೀರಾಮ ಮಂದಿರದ ಬ್ಯಾನರ್ ಹರಿದ ಬಗ್ಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹ ಮಾಡಿತ್ತು.

ಪೊಲೀಸರು ಸುಳ್ಯ ಪೇಟೆಯ ಆಸುಪಾಸಿನಲ್ಲಿ 40 ಕಡೆಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ. ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುವ ವಯಸ್ಸಾದ ವ್ಯಕ್ತಿಯೊಬ್ಬ ಆ ಬ್ಯಾನರನ್ನು ಹರಿದು ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಕಂಡುಬಂದಿದೆ. ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿರುವುದನ್ನು ಸಾರ್ವಜನಿಕರು ನೋಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.
ಹರಿದ ಬ್ಯಾನರ್ ತುಂಡನ್ನು ಪರಿಶೀಲಿಸಿದಾಗ ಶ್ರೀರಾಮನ ಫೋಟೊಗೆ ಯಾವುದೇ ಹಾನಿ ಮಾಡಿರುವುದು ಕಂಡುಬಂದಿಲ್ಲ. ಹರಿದ ಬ್ಯಾನರ್ ತುಂಡನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಯಾರೋ ಕಿಡಿಗೇಡಿಗಳು ಕೋಮು ದ್ವೇಷ ಹರಡಿಸುವುದಕ್ಕಾಗಿ ಇಂತಹ ಕೃತ್ಯ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ತನಿಖೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಎನ್ನುವುದು ತಿಳಿಯುತ್ತಲೇ ವಾತಾವರಣ ತಿಳಿಯಾಗಿದೆ.
Sullia banner of Sri Ram torn sparks outrage, BJP leaders demand action. A banner featuring the image of deity Sri Ram, displayed near the private bus stand in the city to commemorate the Sullia temple fair, the inauguration of the Ram Mandir in Ayodhya, and the silver jubilee of the BMS autorickshaw drivers’ union, was vandalized by miscreants.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm