ಬ್ರೇಕಿಂಗ್ ನ್ಯೂಸ್
20-11-20 03:03 pm Mangalore Correspondent ಕರಾವಳಿ
ಉಡುಪಿ, ನ.20: ಮಂಗಳಮುಖಿಯರನ್ನು ನಾಗರಿಕ ಸಮಾಜ ಪರಿತ್ಯಕ್ತ ಭಾವನೆಯಿಂದಲೇ ಕಾಣುತ್ತದೆ. ಆದರೆ, ಅದೇ ಮಂಗಳಮುಖಿಯರು ಮಾನವೀಯ ಕಾರ್ಯದ ಮೂಲಕ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರು ನಿವಾಸಿ ಆರಾಧ್ಯ ಎಂಬ ಎರಡೂವರೆ ವರ್ಷದ ಹೆಣ್ಣು ಮಗುವಿಗೆ ಶ್ರವಣ ದೋಷದ ಸಮಸ್ಯೆ ಇತ್ತು. ಮಗುವಿನ ಚಿಕಿತ್ಸೆಗೆ ಬರೋಬ್ಬರಿ 14 ಲಕ್ಷ ರೂ. ಅಗತ್ಯ ಇತ್ತು. ಮಾತ್ರವಲ್ಲ, ಮೂರು ತಿಂಗಳ ಒಳಗಾಗಿ ಈ ಸರ್ಜರಿ ಮಾಡಲೇಬೇಕಿತ್ತು.

ಈ ವಿಷಯ ತಿಳಿದ ಉಡುಪಿಯ ಮಂಗಳಮುಖಿಯರ ತಂಡ, ಹೆಣ್ಣು ಮಗುವಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸಿ ಹಣಸಂಗ್ರಹ ಮಾಡಿದೆ. ಮಂಗಳಮುಖಿಯರ ತಂಡದ ನೇತೃತ್ವ ವಹಿಸಿದವರು ಸಮೀಕ್ಷಾ ಎಂಬವರು. ಎಂಬಿಎ ಪದವೀಧರೆಯಾಗಿರುವ ಸಮೀಕ್ಷಾ ತನ್ನ ತಂಡದವರಾದ ಸಾನ್ವಿ, ರೇಖಾ, ಸಂಧ್ಯಾ, ನಿಶಾ, ಲಾವಣ್ಯ ಜೊತೆ ಸೇರಿಕೊಂಡು ಹಣ ಸಂಗ್ರಹಿಸಿದೆ.
ಉಡುಪಿ ಜಿಲ್ಲೆಯಾದ್ಯಂತ ಅಂಗಡಿ- ಮುಂಗಟ್ಟುಗಳು, ಮಾರುಕಟ್ಟೆ ಪ್ರದೇಶ ಮತ್ತು ಮನೆಗಳಿಗೆ ತೆರಳಿ ಎರಡೂವರೆ ವರ್ಷದ ಪುಟ್ಟ ಕಂದಮ್ಮಳಿಗಾಗಿ ಹಣ ಸಂಗ್ರಹಿಸಿದ್ದು ಸುಮಾರು 21 ಸಾವಿರದಷ್ಟು ಮೊತ್ತವನ್ನು ಮಗುವಿಗೆ ಹಸ್ತಾಂತರಿಸಿದ್ದಾರೆ. ಈ ಮೂಲಕ ಮಂಗಳಮುಖಿಯರು ಮಾನವೀಯತೆ ಮೆರೆದಿದ್ದಾರೆ. ಮೇಲ್ನೋಟಕ್ಕೆ ಈ ಹಣ ಸಣ್ಣ ಮೊತ್ತವೇ ಆಗಿದ್ದರೂ, ಮಗುವಿಗಾಗಿ ಮಿಡಿದ ಮಂಗಳಮುಖಿಯರ ಮಾನವೀಯತೆಗೆ ಮೆಚ್ಚಬೇಕು.
ಉಡುಪಿ ಜಿಲ್ಲೆಯಲ್ಲಿ ಇವರು ಆಶ್ರಯ ಸಮುದಾಯ ಸಂಘಟನೆ ಎಂಬ ಸಂಘ ಮಾಡಿಕೊಂಡಿದ್ದು ಇದರಲ್ಲಿ 283 ಜನ ಸದಸ್ಯರಿದ್ದಾರೆ. ಪಿಯುಸಿ ಮಾಡಿದವರು, ಪದವಿ ಮಾಡಿದವರು, ಎಂಬಿಎ ಕಲಿತವರು, ಮತ್ತು ಬಿಬಿಎಂ ಕಲಿತವರು ಈ ಸಂಘಟನೆಯಲ್ಲಿ ಇದ್ದಾರೆ.
Transgenders in Udupi show noble side by collecting about Rs 21,000 to help a little girl for operation.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am