ಬ್ರೇಕಿಂಗ್ ನ್ಯೂಸ್
12-01-24 11:27 pm Mangalore Correspondent ಕರಾವಳಿ
ಮಂಗಳೂರು, ಜ.13 : ತಮ್ಮ ಮೇಲೆ ಮಾಹಿತಿ ಆಯೋಗ ದಂಡ ವಿಧಿಸಿದ ಪ್ರಕರಣವನ್ನು ರಾಜ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದ ವಾರ್ತಾಧಿಕಾರಿ ರೋಹಿಣಿ ಕೆ ಅವರಿಗೆ ರಾಜ್ಯ ಹೈಕೋರ್ಟ್ ದಂಡ ವಿಧಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.
2013ರಲ್ಲಿ ರೋಹಿಣಿ ಕೆ. ಅವರು ದ.ಕ. ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದಾಗ ಪತ್ರಕರ್ತ ಇಕ್ಬಾಲ್ ಕುತ್ತಾರ್ ಅವರು ಇಲಾಖೆಯು ಏರ್ಪಡಿಸಿದ್ದ ಜಿಲ್ಲಾ ವ್ಯಾಪ್ತಿಯ ಪ್ರೌಢಶಾಲಾ ಗಿರಿಜನ ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದ ಖರ್ಚು ವೆಚ್ಚಗಳ ವಿವರ ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ರಿ ಅರ್ಜಿಗೆ ಮಾಹಿತಿ ನೀಡದೆ ನಿರಾಕರಿಸಿದ್ದ ವಾರ್ತಾಧಿಕಾರಿ ರೋಹಿಣಿ ವಿರುದ್ಧ ಇಕ್ಬಾಲ್ ಕುತ್ತಾರ್ ರಾಜ್ಯ ಮಾಹಿತಿ ಆಯೋಗದಲ್ಲಿ ದೂರು ಸಲ್ಲಿಸಿದಾಗ, ತನಿಖೆ ನಡೆಸಿದ ಆಯೋಗ ಮಾಹಿತಿ ನಿರಾಕರಿಸಿರುವುದು ಸರಿಯಲ್ಲವೆಂದು ರೋಹಿಣಿ ಅವರಿಗೆ ಎರಡು ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿತ್ತು.
ಆದರೆ, ಮಾಹಿತಿ ಆಯೋಗದ ಈ ಆದೇಶವನ್ನು ಸಂವಿಧಾನದ ಕಲಂ 226 ಮತ್ತು 227ರ ಪ್ರಕಾರ ರದ್ದುಪಡಿಸುವಂತೆ ರೋಹಿಣಿ ಅವರು ರಾಜ್ಯ ಹೈಕೋರ್ಟ್ ಮೆಟ್ಟಿಲೇರಿ 2015ಕ್ಕೆ ರಿಟ್ ಅರ್ಜಿ ದಾಖಲಿಸಿದ್ದರು. ಪ್ರಕರಣದಲ್ಲಿ ರಾಜ್ಯ ಮಾಹಿತಿ ಆಯೋಗ ಹಾಗೂ ಇಕ್ಬಾಲ್ ಕುತ್ತಾರ್ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದರು.
ಕಳೆದ ಎಂಟು ವರ್ಷಗಳಿಂದ ಫಿರ್ಯಾದುದಾರರು ಹಾಗೂ ಪ್ರತಿವಾದಿಗಳ ವಾದಗಳನ್ನು ಆಲಿಸಿದ ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ, ಪ್ರಕರಣದಲ್ಲಿ ಫಿರ್ಯಾದುದಾರರ ಅರ್ಹತೆಯ ಕೊರತೆಯಿದ್ದು, ರಾಜ್ಯ ಮಾಹಿತಿ ಆಯೋಗದ ಆದೇಶ ರದ್ದುಪಡಿಸಲು ಯೋಗ್ಯವಲ್ಲವೆಂದು ಮನಗಂಡಿದೆ. ಅಲ್ಲದೆ ವಾರ್ತಾಧಿಕಾರಿ ರೋಹಿಣಿ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿ, ಪ್ರಕರಣದಲ್ಲಿ ಮಾಹಿತಿ ನಿರಾಕರಿಸಲ್ಪಟ್ಟು ಆಯೋಗಕ್ಕೆ ದೂರು ಸಲ್ಲಿಸಿ ದಂಡನೆ ವಿಧಿಸಲು ಕಾರಣರಾದ ಇಕ್ಬಾಲ್ ಕುತ್ತಾರ್ ಅವರಿಗೆ ರೋಹಿಣಿ ಅವರು ಒಂದು ತಿಂಗಳೊಳಗಾಗಿ 25 ಸಾವಿರ ರೂ. ಜುಲ್ಮಾನೆ ನೀಡುವಂತೆ ನ್ಯಾಯಮೂರ್ತಿ ಆರ್. ನಟರಾಜ್ ತೀರ್ಪು ನೀಡಿದ್ದಾರೆ.
The Karnataka High Court has imposed a fine on Information Officer Rohini K for filing a writ petition in the State High Court challenging the imposition of penalty on her by the Information Commission.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm