ಬ್ರೇಕಿಂಗ್ ನ್ಯೂಸ್
12-01-24 11:27 pm Mangalore Correspondent ಕರಾವಳಿ
ಮಂಗಳೂರು, ಜ.13 : ತಮ್ಮ ಮೇಲೆ ಮಾಹಿತಿ ಆಯೋಗ ದಂಡ ವಿಧಿಸಿದ ಪ್ರಕರಣವನ್ನು ರಾಜ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದ ವಾರ್ತಾಧಿಕಾರಿ ರೋಹಿಣಿ ಕೆ ಅವರಿಗೆ ರಾಜ್ಯ ಹೈಕೋರ್ಟ್ ದಂಡ ವಿಧಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.
2013ರಲ್ಲಿ ರೋಹಿಣಿ ಕೆ. ಅವರು ದ.ಕ. ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದಾಗ ಪತ್ರಕರ್ತ ಇಕ್ಬಾಲ್ ಕುತ್ತಾರ್ ಅವರು ಇಲಾಖೆಯು ಏರ್ಪಡಿಸಿದ್ದ ಜಿಲ್ಲಾ ವ್ಯಾಪ್ತಿಯ ಪ್ರೌಢಶಾಲಾ ಗಿರಿಜನ ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದ ಖರ್ಚು ವೆಚ್ಚಗಳ ವಿವರ ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ರಿ ಅರ್ಜಿಗೆ ಮಾಹಿತಿ ನೀಡದೆ ನಿರಾಕರಿಸಿದ್ದ ವಾರ್ತಾಧಿಕಾರಿ ರೋಹಿಣಿ ವಿರುದ್ಧ ಇಕ್ಬಾಲ್ ಕುತ್ತಾರ್ ರಾಜ್ಯ ಮಾಹಿತಿ ಆಯೋಗದಲ್ಲಿ ದೂರು ಸಲ್ಲಿಸಿದಾಗ, ತನಿಖೆ ನಡೆಸಿದ ಆಯೋಗ ಮಾಹಿತಿ ನಿರಾಕರಿಸಿರುವುದು ಸರಿಯಲ್ಲವೆಂದು ರೋಹಿಣಿ ಅವರಿಗೆ ಎರಡು ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿತ್ತು.
ಆದರೆ, ಮಾಹಿತಿ ಆಯೋಗದ ಈ ಆದೇಶವನ್ನು ಸಂವಿಧಾನದ ಕಲಂ 226 ಮತ್ತು 227ರ ಪ್ರಕಾರ ರದ್ದುಪಡಿಸುವಂತೆ ರೋಹಿಣಿ ಅವರು ರಾಜ್ಯ ಹೈಕೋರ್ಟ್ ಮೆಟ್ಟಿಲೇರಿ 2015ಕ್ಕೆ ರಿಟ್ ಅರ್ಜಿ ದಾಖಲಿಸಿದ್ದರು. ಪ್ರಕರಣದಲ್ಲಿ ರಾಜ್ಯ ಮಾಹಿತಿ ಆಯೋಗ ಹಾಗೂ ಇಕ್ಬಾಲ್ ಕುತ್ತಾರ್ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದರು.
ಕಳೆದ ಎಂಟು ವರ್ಷಗಳಿಂದ ಫಿರ್ಯಾದುದಾರರು ಹಾಗೂ ಪ್ರತಿವಾದಿಗಳ ವಾದಗಳನ್ನು ಆಲಿಸಿದ ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ, ಪ್ರಕರಣದಲ್ಲಿ ಫಿರ್ಯಾದುದಾರರ ಅರ್ಹತೆಯ ಕೊರತೆಯಿದ್ದು, ರಾಜ್ಯ ಮಾಹಿತಿ ಆಯೋಗದ ಆದೇಶ ರದ್ದುಪಡಿಸಲು ಯೋಗ್ಯವಲ್ಲವೆಂದು ಮನಗಂಡಿದೆ. ಅಲ್ಲದೆ ವಾರ್ತಾಧಿಕಾರಿ ರೋಹಿಣಿ ಅವರ ರಿಟ್ ಅರ್ಜಿಯನ್ನು ವಜಾಗೊಳಿಸಿ, ಪ್ರಕರಣದಲ್ಲಿ ಮಾಹಿತಿ ನಿರಾಕರಿಸಲ್ಪಟ್ಟು ಆಯೋಗಕ್ಕೆ ದೂರು ಸಲ್ಲಿಸಿ ದಂಡನೆ ವಿಧಿಸಲು ಕಾರಣರಾದ ಇಕ್ಬಾಲ್ ಕುತ್ತಾರ್ ಅವರಿಗೆ ರೋಹಿಣಿ ಅವರು ಒಂದು ತಿಂಗಳೊಳಗಾಗಿ 25 ಸಾವಿರ ರೂ. ಜುಲ್ಮಾನೆ ನೀಡುವಂತೆ ನ್ಯಾಯಮೂರ್ತಿ ಆರ್. ನಟರಾಜ್ ತೀರ್ಪು ನೀಡಿದ್ದಾರೆ.
The Karnataka High Court has imposed a fine on Information Officer Rohini K for filing a writ petition in the State High Court challenging the imposition of penalty on her by the Information Commission.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm