ಬ್ರೇಕಿಂಗ್ ನ್ಯೂಸ್
13-01-24 10:56 pm Mangalore Correspondent ಕರಾವಳಿ
ಬಂಟ್ವಾಳ, ಜ.13: ಹೆಲ್ಮೆಟ್ ಹಾಕದೆ ಸಂಚಾರ ಮಾಡುತ್ತಿದ್ದ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ನಿಲ್ಲಿಸಲು ಸೂಚನೆ ನೀಡಿದಾಗ ನಿಲ್ಲಿಸದೆ ಹೋಗಿದ್ದಾರೆ ಎಂಬ ಕಾರಣಕ್ಕಾಗಿ ಅಟ್ಟಿಸಿಕೊಂಡು ಬಂದು ಬೈಕ್ ಗೆ ಲಾಕ್ ಹಾಕಿದ್ದಕ್ಕೆ ಸಾರ್ವಜನಿಕರು ಹಾಗೂ ಟ್ರಾಫಿಕ್ ಎ.ಎಸ್.ಐ. ಮಧ್ಯೆ ಜಟಾಪಟಿ ನಡೆದ ಘಟನೆ ಬಿಸಿರೋಡಿನ ತಾಲೂಕು ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಡೆದಿದೆ.
ಟ್ರಾಫಿಕ್ ಎಎಸ್ಐ ಜನಾರ್ದನ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ನಡೆದಿದ್ದು ಕೊನೆಗೆ ಬೈಕ್ ಗೆ ಹಾಕಿದ್ದ ಲಾಕ್ ಅನ್ನು ತೆಗದು ಹೋಗಿದ್ದಾರೆ. ಭಾಸ್ಕರ ಮಣಿಹಳ್ಳ ಎಂಬವರು ಬೈಕ್ ರಿಪೇರಿಗಾಗಿ ಕೈಕುಂಜೆಯ ಮೆಕ್ಯಾನಿಕ್ ಬಳಿ ಇಟ್ಟಿದ್ದರು. ಇವರ ಬೈಕ್ ಯಾವುದೋ ಪ್ರಕರಣದಲ್ಲಿ ಪೋಲೀಸ್ ಠಾಣೆಯಲ್ಲಿ ಹಲವು ಸಮಯದಿಂದ ಇದ್ದು, ಬ್ಯಾಟರಿ ಸಹಿತ ಇನ್ನಿತರ ಸಾಮಾಗ್ರಿಗಳು ಕೆಟ್ಟುಹೋಗಿತ್ತು. ಠಾಣೆಯಿಂದ ಬಿಡುಗಡೆಗೊಳಿಸಿದ ಬೈಕ್ ನ್ನು ರಿಪೇರಿಗಾಗಿ ಅವರು ಶಬರಿಮಲೆ ಯಾತ್ರೆ ಹೋಗುವ ವೇಳೆ ಮೆಕ್ಯಾನಿಕ್ ಬಳಿ ಇಟ್ಟಿದ್ದರು.





ಶಬರಿಮಲೆಯಿಂದ ಆಗಮಿಸಿ ಶನಿವಾರ ಬೆಳಗ್ಗೆ ಬೈಕ್ ಟೆಸ್ಟ್ ರೈಡ್ ಮಾಡುವ ಉದ್ದೇಶದಿಂದ ಕೈಕುಂಜೆ ರಸ್ತೆಯಲ್ಲಿ ಹೆಲ್ಮೆಟ್ ಧರಿಸದೆ ಸಂಚಾರ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಟ್ರಾಫಿಕ್ ಪೋಲೀಸರು ಬೈಕ್ ನಿಲ್ಲಿಸಲು ಸೂಚಿಸಿದ್ದಾರೆ. ಆದರೆ ಬೈಕ್ ಸವಾರ ಭಾಸ್ಕರ್ ಅವರು ಬೈಕ್ ನಿಲ್ಲಿಸದೆ ಹೋಗಿದ್ದಾರೆ. ಈ ಕಾರಣಕ್ಕೆ ಎ.ಎಸ್.ಐ. ಹಾಗೂ ಸಿಬ್ಬಂದಿಯವರು ಸವಾರನನ್ನು ಬೆನ್ನಟ್ಟಿ ಬಂದು ತಾಲೂಕು ಪಂಚಾಯತ್ ಎದುರು ಮರದ ಅಡಿಯಲ್ಲಿ ನಿಲ್ಲಿಸಿ ಹೋಗಿದ್ದ ಬೈಕ್ ಗೆ ಲಾಕ್ ಹಾಕಿದ್ದಾರೆ. ಇದರಿಂದ ಕುಪಿತರಾದ ಬೈಕ್ ಸವಾರ ಹಾಗೂ ಸಾರ್ವಜನಿಕರು ಇವರ ನಡೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದರು.
ಲಾಕ್ ಮಾಡಲು ಅವಕಾಶ ಇದೆಯಾ?
ಸವಾರರನ್ನು ಬೆನ್ನಟ್ಟಿ ವಾಹನಗಳಿಗೆ ಲಾಕ್ ಹಾಕುವ ಅವಕಾಶ ಟ್ರಾಫಿಕ್ ಪೋಲೀಸರಿಗೆ ಇದೆಯಾ? ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಮಾಡಿದ್ದಾರೆ.
ವಾಗ್ವಾದ ಸಂದರ್ಭದಲ್ಲಿ ಟ್ರಾಫಿಕ್ ಎಎಸ್ಐ ಬಳಕೆ ಮಾಡಿದ ಬೈಕಿನ ವಿಮೆ ಪಾಲಿಸಿಯ ಅವಧಿ ಮುಗಿದಿದೆ ಎಂದು ಆನ್ ಲೈನ್ ತೋರಿಸುತ್ತಿದೆ ಎಂದು ಆರೋಪ ಮಾಡಿದರು. ವಿಮೆ ಇಲ್ಲದೆ ಪೋಲೀಸರ ವಾಹನ ರಸ್ತೆಗೆ ಇಳಿಯಬಹುದಾ ಎಂದು ಪ್ರಶ್ನಿಸಿ ತರಾಟೆಗೆತ್ತಿಕೊಂಡರು.
The public and the Traffic ASI have been suspended for not stopping the bike when the traffic police instructed them to stop it while they were not wearing a helmet. The incident took place in front of the taluk panchayat office on BC Road.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm