ಬ್ರೇಕಿಂಗ್ ನ್ಯೂಸ್
14-01-24 08:58 pm Mangalore Correspondent ಕರಾವಳಿ
ಮಂಗಳೂರು, ಜ.14: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕ ಎಡಪದವಿನಲ್ಲಿ ನಡೆದಿದೆ.
ಶಾಸಕ ರಾಜೇಶ್ ನಾಯ್ಕ್ ಅವರು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಮಧ್ಯಾಹ್ನ ತೆಂಕ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆಗೆ ತೆರಳಿದ್ದು ಮಧ್ಯಾಹ್ನ 1.30ರ ಸುಮಾರಿಗೆ ಪೂಜೆ ಮುಗಿಸಿ ರಸ್ತೆ ದಾಟಲು ನಿಂತಿದ್ದಾಗ ಎದುರಿನಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಮೂಡುಬಿದ್ರೆಯಿಂದ ಮಂಗಳೂರು ಸಾಗುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಶಾಸಕರಿಗೆ ಡಿಕ್ಕಿಯಾದರೂ ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಸ್ಥಳೀಯರು ಕೂಡಲೇ ಗಾಡಿ ನಂಬರ್ ನೋಟ್ ಮಾಡಿ ಬಜ್ಪೆ ಪೊಲೀಸರಿಗೆ ತಿಳಿಸಿದ್ದರು. ನಿಲ್ಲಿಸದೆ ಪರಾರಿಯಾದ ಕಾರನ್ನು ಬಳಿಕ ಗುರುಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಟ್ ಅಂಡ್ ರನ್ ಮಾಡಿದ ಆರೋಪಿ ಮೊಹಮ್ಮದ್ ಸುಫೈಲನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಅವರ ಎರಡೂ ಕಾಲಿಗೆ ಗಾಯಗೊಂಡಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ. ಘಟನೆ ಬಗ್ಗೆ ಬಜ್ಪೆ ಠಾಣೆಯಲ್ಲಿ ಶಾಸಕರ ಪಿಎ ಪವನ್ ಕುಮಾರ್ ಶೆಟ್ಟಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕಾರು ಚಾಲಕ ರೈಲ್ವೇ ನಿಲ್ದಾಣಕ್ಕೆಂದು ವೇಗವಾಗಿ ಬರುತ್ತಿದ್ದ. ತೆಂಕ ಎಡಪದವಿನಲ್ಲಿ ಒಂದು ಕಡೆ ಲಾರಿ ಇದ್ದುದರಿಂದ ಅದನ್ನು ಓವರ್ ಟೇಕ್ ಮಾಡಿ ಬರುವಾಗ ಶಾಸಕರ ಮೇಲೆ ಡಿಕ್ಕಿಯಾಗಿದ್ದಾನೆ. ಸ್ಥಳದಲ್ಲಿ ಜನರು ಇದ್ದುದರಿಂದ ನಿಲ್ಲಿಸದೆ ಪರಾರಿಯಾಗಿದ್ದ. ಲುಂಗಿ ಉಟ್ಟಿದ್ದ ಶಾಸಕರು ಕಾರಿನ ಹೊಡೆತಕ್ಕೆ ಸಿಲುಕಿದ್ದರು. ಆದರೆ ಅದೃಷ್ಟದಿಂದ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ.
Bantwal MLA Rajesh Naik has escaped a near fatal road accident in Bajpe police station limits on Sunday, January 14, in the afternoon. The legislator has suffered injuries in both of his knees and is undergoing treatment.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm