ಬ್ರೇಕಿಂಗ್ ನ್ಯೂಸ್
14-01-24 08:58 pm Mangalore Correspondent ಕರಾವಳಿ
ಮಂಗಳೂರು, ಜ.14: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕ ಎಡಪದವಿನಲ್ಲಿ ನಡೆದಿದೆ.
ಶಾಸಕ ರಾಜೇಶ್ ನಾಯ್ಕ್ ಅವರು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಮಧ್ಯಾಹ್ನ ತೆಂಕ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆಗೆ ತೆರಳಿದ್ದು ಮಧ್ಯಾಹ್ನ 1.30ರ ಸುಮಾರಿಗೆ ಪೂಜೆ ಮುಗಿಸಿ ರಸ್ತೆ ದಾಟಲು ನಿಂತಿದ್ದಾಗ ಎದುರಿನಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಮೂಡುಬಿದ್ರೆಯಿಂದ ಮಂಗಳೂರು ಸಾಗುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಶಾಸಕರಿಗೆ ಡಿಕ್ಕಿಯಾದರೂ ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಸ್ಥಳೀಯರು ಕೂಡಲೇ ಗಾಡಿ ನಂಬರ್ ನೋಟ್ ಮಾಡಿ ಬಜ್ಪೆ ಪೊಲೀಸರಿಗೆ ತಿಳಿಸಿದ್ದರು. ನಿಲ್ಲಿಸದೆ ಪರಾರಿಯಾದ ಕಾರನ್ನು ಬಳಿಕ ಗುರುಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಟ್ ಅಂಡ್ ರನ್ ಮಾಡಿದ ಆರೋಪಿ ಮೊಹಮ್ಮದ್ ಸುಫೈಲನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಅವರ ಎರಡೂ ಕಾಲಿಗೆ ಗಾಯಗೊಂಡಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ. ಘಟನೆ ಬಗ್ಗೆ ಬಜ್ಪೆ ಠಾಣೆಯಲ್ಲಿ ಶಾಸಕರ ಪಿಎ ಪವನ್ ಕುಮಾರ್ ಶೆಟ್ಟಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕಾರು ಚಾಲಕ ರೈಲ್ವೇ ನಿಲ್ದಾಣಕ್ಕೆಂದು ವೇಗವಾಗಿ ಬರುತ್ತಿದ್ದ. ತೆಂಕ ಎಡಪದವಿನಲ್ಲಿ ಒಂದು ಕಡೆ ಲಾರಿ ಇದ್ದುದರಿಂದ ಅದನ್ನು ಓವರ್ ಟೇಕ್ ಮಾಡಿ ಬರುವಾಗ ಶಾಸಕರ ಮೇಲೆ ಡಿಕ್ಕಿಯಾಗಿದ್ದಾನೆ. ಸ್ಥಳದಲ್ಲಿ ಜನರು ಇದ್ದುದರಿಂದ ನಿಲ್ಲಿಸದೆ ಪರಾರಿಯಾಗಿದ್ದ. ಲುಂಗಿ ಉಟ್ಟಿದ್ದ ಶಾಸಕರು ಕಾರಿನ ಹೊಡೆತಕ್ಕೆ ಸಿಲುಕಿದ್ದರು. ಆದರೆ ಅದೃಷ್ಟದಿಂದ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ.
Bantwal MLA Rajesh Naik has escaped a near fatal road accident in Bajpe police station limits on Sunday, January 14, in the afternoon. The legislator has suffered injuries in both of his knees and is undergoing treatment.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm