ಬ್ರೇಕಿಂಗ್ ನ್ಯೂಸ್
14-01-24 10:46 pm Mangalore Correspondent ಕರಾವಳಿ
ಮಂಗಳೂರು, ಜ.15: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸುಟ್ಟ ಗಾಯಗಳಿಂದ ಮೃತಪಟ್ಟ ಘಟನೆ ನಡೆದಿದೆ.
ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿಮಿಟೆಡ್ ಎಂಬ ಕಾರ್ಖಾನೆಯಲ್ಲಿ ಶನಿವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಬೆಂಕಿ ಅನಾಹುತ ಸಂಭವಿಸಿದೆ. ವೆಲ್ಡಿಂಗ್ ಕಾರ್ಮಿಕ ರೊನಾಲ್ಡ್ ಪೌಲ್ ಮೃತ ವ್ಯಕ್ತಿ. ಇವರು ಮತ್ತು ಇತರ ಆರು ಮಂದಿ ಖಾಲಿ ತೈಲ ಟ್ಯಾಂಕ್ನ ದುರಸ್ತಿ ಕೆಲಸ ಮಾಡುತ್ತಿದ್ದರು. ರೊನಾಲ್ಡ್ ಅವರು ಟ್ಯಾಂಕ್ ಮೇಲ್ಭಾಗದಲ್ಲಿ ನಿಂತು ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಕೆಳಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದೊಡ್ಡ ಶಬ್ದದೊಂದಿಗೆ ಬ್ಲಾಸ್ಟ್ ಆಗಿದೆ. ರೊನಾಲ್ಡ್ ಅವರು ಟ್ಯಾಂಕ್ ಮೇಲಿನಿಂದ 20 ಅಡಿ ಕೆಳಕ್ಕೆ ಎಸೆಯಲ್ಪಟ್ಟಿದ್ದು, ತಲೆ ಮತ್ತು ಹೊಟ್ಟೆ, ಎದೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಇತರರಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆಗೆ ಎಜೆ ಆಸ್ಪತ್ರೆಗೆ ಸಾಗಿಸಿದರೂ ರಾತ್ರಿ ವೇಳೆ ರೊನಾಲ್ಡ್ ಪೌಲ್ ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಇತರ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಖಾನೆಯಲ್ಲಿ ಕಾರ್ಮಿಕರ ಬಗ್ಗೆ ಮುಂಜಾಗ್ರತೆ ವಹಿಸದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಪಣಂಬೂರು ಠಾಣೆಯಲ್ಲಿ ಕಲಂ 304ಎ ಮತ್ತು 337 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
A man, who was working as a welding worker, died of burn injuries after a fire broke out at a chemical factory in Baikampady industrial complex here on Saturday.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm