ಬ್ರೇಕಿಂಗ್ ನ್ಯೂಸ್
15-01-24 06:26 pm Mangalore Correspondent ಕರಾವಳಿ
ಬೆಂಗಳೂರು, ಜ.15: ಸೌಲಭ್ಯಗಳ ಕೊರತೆ ಹಿನ್ನೆಲೆಯಲ್ಲಿ ಮಂಗಳೂರಿನ ಜಿ.ಆರ್. ವೈದ್ಯಕೀಯ ಕಾಲೇಜಿಗೆ 2022-23ನೇ ಸಾಲಿನ ಎಂಬಿಬಿಎಸ್ ಕೋರ್ಸ್ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ನಿರ್ಧಾರದಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೆ, 2021-22ನೇ ಸಾಲಿನಲ್ಲಿ ಕಾಲೇಜಿಗೆ ಪ್ರವೇಶ ಪಡೆದು ಎಂಬಿಬಿಎಸ್ ಕೋರ್ಸ್ ಮುಂದುವರೆಸುತ್ತಿದ್ದ 150 ಮಂದಿ ವಿದ್ಯಾರ್ಥಿಗಳನ್ನು ರಾಜ್ಯದ ಇತರೆ ಕಾಲೇಜುಗಳಿಗೆ ಸ್ಥಳಾಂತರಿಸಲು ಸೂಚಿಸಿದ್ದ ಎನ್ಎಂಸಿ ನಿರ್ಧಾರವನ್ನು ಎತ್ತಿ ಹಿಡಿದಿದೆ. ಕಾಲೇಜಿಗೆ ಅನುಮತಿ ಮುಂದುವರೆಸುವುದು ಮತ್ತು ವಿದ್ಯಾರ್ಥಿಗಳನ್ನು ಮತ್ತೊಂದು ಕಾಲೇಜಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದ ಎನ್ಎಂಸಿ ಹಾಗೂ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಕಾಲೇಜು ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದ್ದು, ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಎನ್ಎಂಸಿ ಸಿಬ್ಬಂದಿ 2022ರ ಸೆ.5 ಮತ್ತು 6ರಂದು ಕಾಲೇಜಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿತ್ತು. ಈ ಸಂದರ್ಭದಲ್ಲಿ ಶೇ.71ರಷ್ಟು ಬೋಧಕ ಸಿಬ್ಬಂದಿ ಕೊರತೆ, ಶೇ.79ರಷ್ಟು ವೈದ್ಯರ (ರೆಸಿಡೆಂಟ್) ಕೊರತೆ, ಶೇ.30ರಷ್ಟು ಮಾತ್ರ ಹೊರ ರೋಗಿಗಳ ಹಾಜರಾತಿ ಇತ್ತು. ಶೇ.10ರಷ್ಟು ಮಾತ್ರ ಒಳರೋಗಿಗಳಿದ್ದರು. ಈ ಎಲ್ಲ ಮಾಹಿತಿಯ ಆಧಾರದಲ್ಲಿ ಎನ್ಎಂಸಿ ಕಾಲೇಜಿನ ಅನುಮತಿ ನವೀಕರಿಸಲು ನಿರಾಕರಿಸಿತ್ತು.
ಕಾಲೇಜಿಗೆ ಅನುಮತಿ ನಿರಾಕರಿಸುವುದಕ್ಕೂ ಮುನ್ನ ಕಾಲೇಜಿಗೆ ಹಲವು ಬಾರಿ ಅವಕಾಶಗಳನ್ನು ನೀಡಿದ್ದರೂ, ಸರಿಪಡಿಸಿಕೊಂಡಿಲ್ಲ. ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದಿಂದ ಬೇರೊಂದು ಕಾಲೇಜಿಗೆ ಸ್ಥಳಾಂತರ ನಿರ್ಧಾರ ಮಾಡಲಾಗಿದೆ. ಇದರಲ್ಲಿ ಯಾವುದೇ ದೋಷ ಕಂಡು ಬರುತ್ತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು ಅರ್ಜಿಯನ್ನು ವಜಾಗೊಳಿಸಿದೆ.
G R Medical college Mangalore mbbs seat fraud, high court holds medical license.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm