ಬ್ರೇಕಿಂಗ್ ನ್ಯೂಸ್
15-01-24 06:26 pm Mangalore Correspondent ಕರಾವಳಿ
ಬೆಂಗಳೂರು, ಜ.15: ಸೌಲಭ್ಯಗಳ ಕೊರತೆ ಹಿನ್ನೆಲೆಯಲ್ಲಿ ಮಂಗಳೂರಿನ ಜಿ.ಆರ್. ವೈದ್ಯಕೀಯ ಕಾಲೇಜಿಗೆ 2022-23ನೇ ಸಾಲಿನ ಎಂಬಿಬಿಎಸ್ ಕೋರ್ಸ್ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ನಿರ್ಧಾರದಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೆ, 2021-22ನೇ ಸಾಲಿನಲ್ಲಿ ಕಾಲೇಜಿಗೆ ಪ್ರವೇಶ ಪಡೆದು ಎಂಬಿಬಿಎಸ್ ಕೋರ್ಸ್ ಮುಂದುವರೆಸುತ್ತಿದ್ದ 150 ಮಂದಿ ವಿದ್ಯಾರ್ಥಿಗಳನ್ನು ರಾಜ್ಯದ ಇತರೆ ಕಾಲೇಜುಗಳಿಗೆ ಸ್ಥಳಾಂತರಿಸಲು ಸೂಚಿಸಿದ್ದ ಎನ್ಎಂಸಿ ನಿರ್ಧಾರವನ್ನು ಎತ್ತಿ ಹಿಡಿದಿದೆ. ಕಾಲೇಜಿಗೆ ಅನುಮತಿ ಮುಂದುವರೆಸುವುದು ಮತ್ತು ವಿದ್ಯಾರ್ಥಿಗಳನ್ನು ಮತ್ತೊಂದು ಕಾಲೇಜಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದ ಎನ್ಎಂಸಿ ಹಾಗೂ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಕಾಲೇಜು ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದ್ದು, ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಎನ್ಎಂಸಿ ಸಿಬ್ಬಂದಿ 2022ರ ಸೆ.5 ಮತ್ತು 6ರಂದು ಕಾಲೇಜಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿತ್ತು. ಈ ಸಂದರ್ಭದಲ್ಲಿ ಶೇ.71ರಷ್ಟು ಬೋಧಕ ಸಿಬ್ಬಂದಿ ಕೊರತೆ, ಶೇ.79ರಷ್ಟು ವೈದ್ಯರ (ರೆಸಿಡೆಂಟ್) ಕೊರತೆ, ಶೇ.30ರಷ್ಟು ಮಾತ್ರ ಹೊರ ರೋಗಿಗಳ ಹಾಜರಾತಿ ಇತ್ತು. ಶೇ.10ರಷ್ಟು ಮಾತ್ರ ಒಳರೋಗಿಗಳಿದ್ದರು. ಈ ಎಲ್ಲ ಮಾಹಿತಿಯ ಆಧಾರದಲ್ಲಿ ಎನ್ಎಂಸಿ ಕಾಲೇಜಿನ ಅನುಮತಿ ನವೀಕರಿಸಲು ನಿರಾಕರಿಸಿತ್ತು.
ಕಾಲೇಜಿಗೆ ಅನುಮತಿ ನಿರಾಕರಿಸುವುದಕ್ಕೂ ಮುನ್ನ ಕಾಲೇಜಿಗೆ ಹಲವು ಬಾರಿ ಅವಕಾಶಗಳನ್ನು ನೀಡಿದ್ದರೂ, ಸರಿಪಡಿಸಿಕೊಂಡಿಲ್ಲ. ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದಿಂದ ಬೇರೊಂದು ಕಾಲೇಜಿಗೆ ಸ್ಥಳಾಂತರ ನಿರ್ಧಾರ ಮಾಡಲಾಗಿದೆ. ಇದರಲ್ಲಿ ಯಾವುದೇ ದೋಷ ಕಂಡು ಬರುತ್ತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು ಅರ್ಜಿಯನ್ನು ವಜಾಗೊಳಿಸಿದೆ.
G R Medical college Mangalore mbbs seat fraud, high court holds medical license.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 09:02 pm
Mangalurur Staffer
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm