ಬ್ರೇಕಿಂಗ್ ನ್ಯೂಸ್
15-01-24 06:26 pm Mangalore Correspondent ಕರಾವಳಿ
ಬೆಂಗಳೂರು, ಜ.15: ಸೌಲಭ್ಯಗಳ ಕೊರತೆ ಹಿನ್ನೆಲೆಯಲ್ಲಿ ಮಂಗಳೂರಿನ ಜಿ.ಆರ್. ವೈದ್ಯಕೀಯ ಕಾಲೇಜಿಗೆ 2022-23ನೇ ಸಾಲಿನ ಎಂಬಿಬಿಎಸ್ ಕೋರ್ಸ್ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ನಿರ್ಧಾರದಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೆ, 2021-22ನೇ ಸಾಲಿನಲ್ಲಿ ಕಾಲೇಜಿಗೆ ಪ್ರವೇಶ ಪಡೆದು ಎಂಬಿಬಿಎಸ್ ಕೋರ್ಸ್ ಮುಂದುವರೆಸುತ್ತಿದ್ದ 150 ಮಂದಿ ವಿದ್ಯಾರ್ಥಿಗಳನ್ನು ರಾಜ್ಯದ ಇತರೆ ಕಾಲೇಜುಗಳಿಗೆ ಸ್ಥಳಾಂತರಿಸಲು ಸೂಚಿಸಿದ್ದ ಎನ್ಎಂಸಿ ನಿರ್ಧಾರವನ್ನು ಎತ್ತಿ ಹಿಡಿದಿದೆ. ಕಾಲೇಜಿಗೆ ಅನುಮತಿ ಮುಂದುವರೆಸುವುದು ಮತ್ತು ವಿದ್ಯಾರ್ಥಿಗಳನ್ನು ಮತ್ತೊಂದು ಕಾಲೇಜಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದ ಎನ್ಎಂಸಿ ಹಾಗೂ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಕಾಲೇಜು ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದ್ದು, ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಎನ್ಎಂಸಿ ಸಿಬ್ಬಂದಿ 2022ರ ಸೆ.5 ಮತ್ತು 6ರಂದು ಕಾಲೇಜಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿತ್ತು. ಈ ಸಂದರ್ಭದಲ್ಲಿ ಶೇ.71ರಷ್ಟು ಬೋಧಕ ಸಿಬ್ಬಂದಿ ಕೊರತೆ, ಶೇ.79ರಷ್ಟು ವೈದ್ಯರ (ರೆಸಿಡೆಂಟ್) ಕೊರತೆ, ಶೇ.30ರಷ್ಟು ಮಾತ್ರ ಹೊರ ರೋಗಿಗಳ ಹಾಜರಾತಿ ಇತ್ತು. ಶೇ.10ರಷ್ಟು ಮಾತ್ರ ಒಳರೋಗಿಗಳಿದ್ದರು. ಈ ಎಲ್ಲ ಮಾಹಿತಿಯ ಆಧಾರದಲ್ಲಿ ಎನ್ಎಂಸಿ ಕಾಲೇಜಿನ ಅನುಮತಿ ನವೀಕರಿಸಲು ನಿರಾಕರಿಸಿತ್ತು.
ಕಾಲೇಜಿಗೆ ಅನುಮತಿ ನಿರಾಕರಿಸುವುದಕ್ಕೂ ಮುನ್ನ ಕಾಲೇಜಿಗೆ ಹಲವು ಬಾರಿ ಅವಕಾಶಗಳನ್ನು ನೀಡಿದ್ದರೂ, ಸರಿಪಡಿಸಿಕೊಂಡಿಲ್ಲ. ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದಿಂದ ಬೇರೊಂದು ಕಾಲೇಜಿಗೆ ಸ್ಥಳಾಂತರ ನಿರ್ಧಾರ ಮಾಡಲಾಗಿದೆ. ಇದರಲ್ಲಿ ಯಾವುದೇ ದೋಷ ಕಂಡು ಬರುತ್ತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು ಅರ್ಜಿಯನ್ನು ವಜಾಗೊಳಿಸಿದೆ.
G R Medical college Mangalore mbbs seat fraud, high court holds medical license.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm