ಬ್ರೇಕಿಂಗ್ ನ್ಯೂಸ್
16-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.16: ರೇಶನ್ ಕಾರ್ಡ್ ಸಿಕ್ಕಿಲ್ಲವೆಂದು ಆಕ್ರೋಶಗೊಂಡ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ನಡೆದಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಯನ್ನು ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಲಾಗಿತ್ತು. ರೇಶನ್ ಕಾರ್ಡ್ ಸಿಗುತ್ತಿಲ್ಲ. ಬಿಪಿಎಲ್ ರೇಶನ್ ಕಾರ್ಡ್ ಪಡೆಯಲು ವ್ಯವಸ್ಥೆ ಮಾಡಿ. ನಿಮ್ಮ ಹತ್ತು ಕೇಜಿ ಉಚಿತ ಅಕ್ಕಿ ಬೇಕಾಗಿಲ್ಲ. ನಮಗೆ ದುಡಿದು ತಿನ್ನಲು ಶರೀರ ಗಟ್ಟಿಯಿದೆ. ರೇಶನ್ ಕಾರ್ಡ್ ವ್ಯವಸ್ಥೆ ಮಾಡಲಾಗದ ನಿಮ್ಮ ಸರ್ಕಾರವೆಂದು ಇಬ್ಬರನ್ನೂ ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಸುರತ್ಕಲ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಪೊಲೀಸರು ಆರೋಪಿ ಅನಿಲ್ ಕುಮಾರ್ (34)ನನ್ನು ಬಂಧಿಸಿದ್ದಾರೆ. ಅನಿಲ್ ಮೂಲತಃ ಶಿರಸಿ ನಿವಾಸಿಯಾಗಿದ್ದು, 12 ವರ್ಷಗಳಿಂದ ಸುರತ್ಕಲ್ ಬಳಿ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಜೊತೆಗೆ ವಾಸವಿದ್ದಾನೆ. ಸರ್ಕಾರಿ ಸೌಲಭ್ಯ ಪಡೆಯಲು ರೇಶನ್ ಕಾರ್ಡ್ ಪಡೆಯುವುದಕ್ಕಾಗಿ ಅಲೆದಾಡಿದ್ದ. ಸರ್ವರ್ ಸಮಸ್ಯೆಯಿಂದ ರೇಶನ್ ಕಾರ್ಡ್ ಸಿಗದೆ ಹತಾಶೆಗೊಂಡು ವಿಡಿಯೋ ಮಾಡಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ವಿರುದ್ಧ 153ಎ, 505, 504 ಸೆಕ್ಷನ್ ಅಡಿ ಕೇಸು ದಾಖಲು ಮಾಡಲಾಗಿದೆ.
Mangalore Surathkal man arrested for talking derogatory words against cm Siddaramaiah and Dk Shivakumar. The arrested has been identified as Anil Kumar. The arrest was made after Suhan Alva from congress filed a police complaint.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm