ಬ್ರೇಕಿಂಗ್ ನ್ಯೂಸ್
16-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.16: ರೇಶನ್ ಕಾರ್ಡ್ ಸಿಕ್ಕಿಲ್ಲವೆಂದು ಆಕ್ರೋಶಗೊಂಡ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ನಡೆದಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಯನ್ನು ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಲಾಗಿತ್ತು. ರೇಶನ್ ಕಾರ್ಡ್ ಸಿಗುತ್ತಿಲ್ಲ. ಬಿಪಿಎಲ್ ರೇಶನ್ ಕಾರ್ಡ್ ಪಡೆಯಲು ವ್ಯವಸ್ಥೆ ಮಾಡಿ. ನಿಮ್ಮ ಹತ್ತು ಕೇಜಿ ಉಚಿತ ಅಕ್ಕಿ ಬೇಕಾಗಿಲ್ಲ. ನಮಗೆ ದುಡಿದು ತಿನ್ನಲು ಶರೀರ ಗಟ್ಟಿಯಿದೆ. ರೇಶನ್ ಕಾರ್ಡ್ ವ್ಯವಸ್ಥೆ ಮಾಡಲಾಗದ ನಿಮ್ಮ ಸರ್ಕಾರವೆಂದು ಇಬ್ಬರನ್ನೂ ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಸುರತ್ಕಲ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಪೊಲೀಸರು ಆರೋಪಿ ಅನಿಲ್ ಕುಮಾರ್ (34)ನನ್ನು ಬಂಧಿಸಿದ್ದಾರೆ. ಅನಿಲ್ ಮೂಲತಃ ಶಿರಸಿ ನಿವಾಸಿಯಾಗಿದ್ದು, 12 ವರ್ಷಗಳಿಂದ ಸುರತ್ಕಲ್ ಬಳಿ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಜೊತೆಗೆ ವಾಸವಿದ್ದಾನೆ. ಸರ್ಕಾರಿ ಸೌಲಭ್ಯ ಪಡೆಯಲು ರೇಶನ್ ಕಾರ್ಡ್ ಪಡೆಯುವುದಕ್ಕಾಗಿ ಅಲೆದಾಡಿದ್ದ. ಸರ್ವರ್ ಸಮಸ್ಯೆಯಿಂದ ರೇಶನ್ ಕಾರ್ಡ್ ಸಿಗದೆ ಹತಾಶೆಗೊಂಡು ವಿಡಿಯೋ ಮಾಡಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ವಿರುದ್ಧ 153ಎ, 505, 504 ಸೆಕ್ಷನ್ ಅಡಿ ಕೇಸು ದಾಖಲು ಮಾಡಲಾಗಿದೆ.
Mangalore Surathkal man arrested for talking derogatory words against cm Siddaramaiah and Dk Shivakumar. The arrested has been identified as Anil Kumar. The arrest was made after Suhan Alva from congress filed a police complaint.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm