ಬ್ರೇಕಿಂಗ್ ನ್ಯೂಸ್
16-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.16: ರೇಶನ್ ಕಾರ್ಡ್ ಸಿಕ್ಕಿಲ್ಲವೆಂದು ಆಕ್ರೋಶಗೊಂಡ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ನಡೆದಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಯನ್ನು ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಲಾಗಿತ್ತು. ರೇಶನ್ ಕಾರ್ಡ್ ಸಿಗುತ್ತಿಲ್ಲ. ಬಿಪಿಎಲ್ ರೇಶನ್ ಕಾರ್ಡ್ ಪಡೆಯಲು ವ್ಯವಸ್ಥೆ ಮಾಡಿ. ನಿಮ್ಮ ಹತ್ತು ಕೇಜಿ ಉಚಿತ ಅಕ್ಕಿ ಬೇಕಾಗಿಲ್ಲ. ನಮಗೆ ದುಡಿದು ತಿನ್ನಲು ಶರೀರ ಗಟ್ಟಿಯಿದೆ. ರೇಶನ್ ಕಾರ್ಡ್ ವ್ಯವಸ್ಥೆ ಮಾಡಲಾಗದ ನಿಮ್ಮ ಸರ್ಕಾರವೆಂದು ಇಬ್ಬರನ್ನೂ ಅವಾಚ್ಯವಾಗಿ ನಿಂದಿಸಿ ವಿಡಿಯೋ ಮಾಡಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಸುರತ್ಕಲ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಪೊಲೀಸರು ಆರೋಪಿ ಅನಿಲ್ ಕುಮಾರ್ (34)ನನ್ನು ಬಂಧಿಸಿದ್ದಾರೆ. ಅನಿಲ್ ಮೂಲತಃ ಶಿರಸಿ ನಿವಾಸಿಯಾಗಿದ್ದು, 12 ವರ್ಷಗಳಿಂದ ಸುರತ್ಕಲ್ ಬಳಿ ಬಾಡಿಗೆ ಮನೆಯೊಂದರಲ್ಲಿ ಕುಟುಂಬದ ಜೊತೆಗೆ ವಾಸವಿದ್ದಾನೆ. ಸರ್ಕಾರಿ ಸೌಲಭ್ಯ ಪಡೆಯಲು ರೇಶನ್ ಕಾರ್ಡ್ ಪಡೆಯುವುದಕ್ಕಾಗಿ ಅಲೆದಾಡಿದ್ದ. ಸರ್ವರ್ ಸಮಸ್ಯೆಯಿಂದ ರೇಶನ್ ಕಾರ್ಡ್ ಸಿಗದೆ ಹತಾಶೆಗೊಂಡು ವಿಡಿಯೋ ಮಾಡಿದ್ದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ವಿರುದ್ಧ 153ಎ, 505, 504 ಸೆಕ್ಷನ್ ಅಡಿ ಕೇಸು ದಾಖಲು ಮಾಡಲಾಗಿದೆ.
Mangalore Surathkal man arrested for talking derogatory words against cm Siddaramaiah and Dk Shivakumar. The arrested has been identified as Anil Kumar. The arrest was made after Suhan Alva from congress filed a police complaint.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm