ಬ್ರೇಕಿಂಗ್ ನ್ಯೂಸ್
16-01-24 10:51 pm Mangalore Correspondent ಕರಾವಳಿ
ಮಂಗಳೂರು, ಜ.16: ಈ ಬಾರಿಯ ಮಂಗಳೂರು ಲಿಟ್ ಫೆಸ್ಟ್ 19ರಿಂದ 21ರ ವರೆಗೆ ನಗರದ ಟಿಎಂಎ ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಸಹ್ಯಾದ್ರಿ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶನ ಮಾಡಿದ್ದಾರೆ.
ಮಂಗಳೂರು ಸಾಹಿತ್ಯ ಹಬ್ಬ ಎನ್ನುವ ಹೆಸರಲ್ಲಿ 2018ರಲ್ಲಿ ಆರಂಭಗೊಂಡ ಲಿಟ್ ಫೆಸ್ಟ್ ಹಿನ್ನೆಲೆ ಮತ್ತು ಉದ್ದೇಶ ಏನು ಅನ್ನೋದರ ಬಗ್ಗೆ ಸಾಮಾನ್ಯ ಜನರಿಗೆ ತಲುಪಿಸುವುದಕ್ಕಾಗಿ ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬೀದಿ ನಾಟಕ ಹಮ್ಮಿಕೊಂಡಿದ್ದರು. ವಿದ್ಯಾರ್ಥಿಗಳು ತುಳು, ಕನ್ನಡ ಭಾಷೆಯಲ್ಲಿ ಸೇರಿದ್ದ ನೂರಾರು ಮಂದಿಯ ಮನ ಮುಟ್ಟುವಂತೆ ಅಭಿನಯಿಸಿ, ಸಾಹಿತ್ಯ ಹಬ್ಬಕ್ಕೆ ಬರುವಂತೆ ಕರೆಕೊಟ್ಟಿದ್ದಾರೆ.



ರಾಷ್ಟ್ರ ಮಟ್ಟದ ಚಿಂತಕರು, ಬರಹಗಾರರು ಬರಲಿದ್ದು, ಸಾಮಾನ್ಯ ಜನರ ಜೊತೆಗೂ ಸಂವಾದ ನಡೆಸಲಿದ್ದಾರೆ. ಇದಲ್ಲದೆ, ಸಾಹಿತ್ಯ ಅಭಿರುಚಿ ಉಳ್ಳವರನ್ನು ಸೇರಿಸಿ ಹರಟೆ ಹಬ್ಬ ಎನ್ನುವ ಪರಿಕಲ್ಪನೆಯೂ ಇದೆ. 2018ರಲ್ಲಿ ಅದ್ದೂರಿಯಾಗಿ ನಡೆದಿದ್ದ ಲಿಟ್ ಫೆಸ್ಟ್ ಹಬ್ಬವನ್ನು ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್ ಭೈರಪ್ಪ ಉದ್ಘಾಟಿಸಿದ್ದರು ಅನ್ನುವುದನ್ನು ಹಿಡಿದು ಪ್ರತಿವರ್ಷ ಲಿಟ್ ಫೆಸ್ಟ್ ಗೆ ಬಂದು ಹೋದ ಸಾಹಿತ್ಯ ದಿಗ್ಗಜರ ಹೆಸರು ಸಹಿತ ಲಿಟ್ ಫೆಸ್ಟ್ ನಲ್ಲಿ ಸಾಮಾನ್ಯ ಜನರೂ ಪಾಲ್ಗೊಳ್ಳಬಹುದು. ಭಾರತ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಈ ಸಾಹಿತ್ಯ ಹಬ್ಬವನ್ನು ಸರಕಾರದ ಸಹಾಯ ಇಲ್ಲದೆ ನಡೆಸಿಕೊಂಡು ಬರಲಾಗುತ್ತಿದೆ ಎಂದು ಬೀದಿ ನಾಟಕದ ಮೂಲಕ ತಿಳಿಸಿದ್ದಾರೆ.
ಜನವರಿ 16 ಮತ್ತು 17ರಂದು ಈ ಬೀದಿ ನಾಟಕ ಮಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ನಡೆಯಲಿದೆ. ಒಟ್ಟು ತಂಡವನ್ನು ಕಲಾವಿದೆ ದಿಶಾ ಶೆಟ್ಟಿ ಮುನ್ನಡೆಸುತ್ತಿದ್ದು, ಬೀದಿ ನಾಟಕದ ನಿರ್ದೇಶನವನ್ನು ಗೋವಿಂದದಾಸ ಕಾಲೇಜಿನ ಕಲ್ಚರಲ್ ಡೈರೆಕ್ಟರ್ ವಿನೋದ್ ಶೆಟ್ಟಿ ಕೃಷ್ಣಾಪುರ ಮಾಡಿದ್ದಾರೆ. ಲಿಟ್ ಫೆಸ್ಟ್ ಪೂರ್ವಭಾವಿಯಾಗಿ ಬೀದಿ ನಾಟಕ ಹಮ್ಮಿಕೊಂಡಿದ್ದು, ಸಾಹಿತ್ಯ ಹಬ್ಬಗಳು ಎಲ್ಲ ವರ್ಗದ ಜನರನ್ನೂ ತಲುಪಬೇಕು ಎನ್ನುವ ದೃಷ್ಟಿ ಇಟ್ಟುಕೊಂಡು ರೂಪಿಸಲಾಗಿದೆ.
The MBA students of Sahyadri College staged a street play to promote this year's Lit Fest to be held at TMA Pai Convention Hall in mangaluru from January 19 to 21.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 10:54 am
HK News Staffer
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm