ಬ್ರೇಕಿಂಗ್ ನ್ಯೂಸ್
17-01-24 06:56 pm Mangalore Correspondent ಕರಾವಳಿ
ಪುತ್ತೂರು, ಜ.17: ಬಿಜೆಪಿ ಮುಖಂಡ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ಅಸಹಜ ರೀತಿಯಲ್ಲಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಇವರ ಮನೆಯಿದ್ದು ಬುಧವಾರ ಮಧ್ಯಾಹ್ನ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿದ್ದು ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ ಹನ್ನೊಂದು ಗಂಟೆ ವರೆಗೆ ಪ್ರಕಾಶ್ಚಂದ್ರ ರೈ ಮನೆಯಲ್ಲಿದ್ದು ಆನಂತರ ಹೊರಗೆ ತೆರಳಿದ್ದರು. ಮಧ್ಯಾಹ್ನ ಒಂದೂವರೆ ಗಂಟೆ ವೇಳೆಗೆ ಹೋಗಿ ನೋಡಿದಾಗ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಮಗಳು ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲುಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ರೈ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತ್ಮಹತ್ಯೆಯೋ, ಘಟನೆ ಹೇಗಾಗಿದೆ ಎನ್ನುವ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಂಪ್ಯ ಎಸ್ಐ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಭೇಟಿ ನೀಡಿದ್ದರು.
Mangalore Kumbra society president wife Shublakshmi (50) dies after falling to pond in Puttur.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm