ಬ್ರೇಕಿಂಗ್ ನ್ಯೂಸ್
17-01-24 09:16 pm Mangalore Correspondent ಕರಾವಳಿ
ಮಂಗಳೂರು, ಜ.17: ಮಂಗಳೂರು ಮಹಾನಗರ ಪಾಲಿಕೆಯ ವಿವಿಧ ಪ್ರದೇಶದ ರಸ್ತೆ ಬದಿಗಳಲ್ಲಿ ಕೆಲವೊಂದು ಜಾಹೀರಾತು ಸಂಸ್ಥೆಯವರು ಹಾಗೂ ಖಾಸಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ಹಾಗೂ ರಾಜಕೀಯ, ಧಾರ್ಮಿಕ ಮತ್ತು ಕೆಲವೊಂದು ಖಾಸಗಿ ಸಮಾರಂಭಗಳ ನಿಮಿತ್ತ ಅನಧಿಕೃತ ಬ್ಯಾನರ್ಗಳು, ಕಟೌಟ್, ಬಂಟಿಂಗ್ಸ್, ಮತ್ತು ಪ್ಲೆಕ್ಸ್ ಇತ್ಯಾದಿಗಳನ್ನು ವ್ಯಾಪಕವಾಗಿ ಅಳವಡಿಸುತ್ತಿರುವುದು ಕಂಡುಬಂದಿದೆ.
ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿದ್ದು, ಅಪಘಾತ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿರುವುದಲ್ಲದೆ ಸಾರ್ವಜನಿಕ ಸ್ಥಳಗಳನ್ನು ವಿರೂಪಗೊಳಿಸಿದಂತಾಗುತ್ತಿದೆ. ಅಲ್ಲದೇ, ವಿದ್ಯುತ್ ಅವಘಡಗಳು ಉಂಟಾಗಿ ಪ್ರಾಣಹಾನಿ ಸಂಭವಿಸುವ ಸಾಧ್ಯತೆ ಇದೆ. ಕೆಲವೊಂದು ವಿವಾದಾತ್ಮಕ ಮತ್ತು ದ್ವೇಷ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಅಳವಡಿಸುತ್ತಿರುವುದರಿಂದ ಶಾಂತಿ ಸುವ್ಯವಸ್ಥೆಗೆ ದಕ್ಕೆಯಾಗಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಆಕ್ಷೇಪ ವ್ಯಕ್ತವಾಗುತ್ತಿದೆ.
ಆದ್ದರಿಂದ ಎಲ್ಲಾ ರೀತಿಯ ಅನಧಿಕೃತ ಬ್ಯಾನರ್, ಕಟೌಟ್, ಬಂಟಿಂಗ್ ಮತ್ತು ಫ್ಲೆಕ್ಸ್ ಇತ್ಯಾದಿ ಅಳವಡಿಸುತ್ತಿರುವುದನ್ನು ಈ ಕೂಡಲೇ ಸ್ಥಗಿತಗೊಳಿಸಬೇಕು. ಮಹಾನಗರಪಾಲಿಕೆ ಅಧೀನದಲ್ಲಿ ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿ ಒಟ್ಟು 1084 ಅಧಿಕೃತ ಜಾಹೀರಾತು ಫಲಕಗಳಿದ್ದು, ಈ ಜಾಹೀರಾತು ಫಲಕಗಳನ್ನು ಬಳಕೆ ಮಾಡಿ ಜಾಹೀರಾತುಗಳನ್ನು ಪ್ರಕಟಿಸುವಂತೆ ಸಾರ್ವಜನಿಕರಿಗೆ ಕೋರಲಾಗಿದೆ.
ಅನಧಿಕೃತ ಪ್ಲೆಕ್ಸ್, ಬ್ಯಾನರ್ ಇತ್ಯಾದಿಗಳನ್ನು ಅಳವಡಿಸಿರುವುದು ಕಂಡುಬಂದಲ್ಲಿ ಸಾರ್ವಜನಿಕ ತೆರೆದ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆ, 1981ರ ಪ್ರಕಾರ ಹಾಗೂ ಅನಧಿಕೃತ ಫಲಕಗಳ ಮೂಲಕ ಯಾವುದಾದರೂ ಶಾರ್ಟ್ ಸರ್ಕಿಟ್ ಅಥವಾ ವಿದ್ಯುತ್ ಅವಘಡಗಳಾಗಿ ಪ್ರಾಣಹಾನಿ ಸಂಭವಿಸಿದಲ್ಲಿ ಸಂಬಂಧಪಟ್ಟ ಸಂಸ್ಥೆ ಅಥವಾ ವ್ಯಕ್ತಿ ಅಥವಾ ಪ್ರಕಟಣೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಎಚ್ಚರಿಸಿದ್ದಾರೆ.
Mangalore illegal banner and cutouts, criminal case to be implemented says MCC.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm