ಬ್ರೇಕಿಂಗ್ ನ್ಯೂಸ್
18-01-24 02:58 pm Mangalore Correspondent ಕರಾವಳಿ
ಮಂಗಳೂರು, ಜ.18: ಅಪೂರ್ಣ ರಾಮಮಂದಿರದಲ್ಲಿ ರಾಮನ ಪ್ರತಿಷ್ಠೆ ಮಾಡುವುದೇ ಹಿಂದು ಧರ್ಮಶಾಸ್ತ್ರಕ್ಕೆ ಅಪಚಾರ. ಅದರಲ್ಲೂ ರಾಮ ಜನ್ಮಭೂಮಿಗಾಗಿ ಮೊದಲು ದಾವೆ ಹೂಡಿದ್ದ ಹಿಂದು ಮಹಾಸಭಾ ಮತ್ತು ನಿರ್ಮೋಹಿ ಅಖಾಡವನ್ನು ಮಂದಿರ ಉದ್ಘಾಟನೆ ಸಂದರ್ಭದಲ್ಲಿ ದೂರ ಇಟ್ಟಿದ್ದಾರೆ. ಬಿಜೆಪಿಯಲ್ಲಿದ್ದವರನ್ನೇ ಮುಂದಿಟ್ಟು ಟ್ರಸ್ಟ್ ಮಾಡಿಕೊಂಡಿದ್ದಾರೆ ಎಂದು ಹಿಂದು ಮಹಾಸಭಾ ಕರ್ನಾಟಕ ಇದರ ಸಂಸ್ಥಾಪಕ ರಾಜೇಶ್ ಪವಿತ್ರನ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ರಾಮನ ಮಂದಿರವನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಅಪೂರ್ಣ ಮಂದಿರದಲ್ಲಿ ರಾಮನ ಪ್ರತಿಷ್ಠೆ ಮಾಡಲು ಹೊರಟಿದ್ದು ನೋಡಿದರೆ ಇವರಿಗೆ ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ಭಯ ಇದೆಯೇ ಎನ್ನುವ ಶಂಕೆ ಬರುತ್ತಿದೆ. ಹಿಂದು ಸಮಾಜವನ್ನು ಪ್ರತಿನಿಧಿಸುತ್ತೇವೆಂದು ಹೇಳಿ ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರೇ ಆಗಿರುವ ಸಂಸದ ಸುಬ್ರಹ್ಮಣ್ಯನ್ ಸ್ವಾಮಿ, ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಿ ಎಂದು ಪ್ರಧಾನಿ ಮೋದಿ ಮುಂದೆ ಪ್ರಸ್ತಾಪ ಇಟ್ಟಿದ್ದಾರೆ. ಇವರಿಗೆ ನೈತಿಕತೆ ಇರುತ್ತಿದ್ದರೆ ರಾಮ ಸೇತು ಘೋಷಣೆ ಮಾಡಬಹುದಿತ್ತು. ಅದರಲ್ಲಿ ಲಾಭವನ್ನಷ್ಟೇ ನೋಡುತ್ತಿದ್ದಾರೆ. ರಾಮನ ಬಗ್ಗೆ ನಿಷ್ಠೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಭಗವಾನ್ ರಾಮನನ್ನು ಚುನಾವಣಾ ಸರಕನ್ನಾಗಿ ಮಾಡಿಕೊಂಡಿರುವ ಬಿಜೆಪಿಗೆ ರಾಮನ ಶಾಪ ತಟ್ಟಲಿದೆ ಎಂದು ಹೇಳಿದ ರಾಜೇಶ್ ಪವಿತ್ರನ್, ಜನವರಿ 22ರಂದು ಸರಕಾರದ ನೇತೃತ್ವದಲ್ಲೇ ರಾಮನ ಪ್ರತಿಷ್ಠೆ ಆಗುತ್ತಿದ್ದು ನಾವದನ್ನು ಅನಿವಾರ್ಯ ಎಂಬಂತೆ ಸಂಭ್ರಮಿಸುತ್ತೇವೆ. ಅದರ ಅಂಗವಾಗಿ ಜನವರಿ 22ರಂದು ಬೆಳಗ್ಗೆ ರಾಮನ ಮಂದಿರಕ್ಕಾಗಿ ಶ್ರಮಿಸಿದ ಕರಸೇವಕರನ್ನು ಗೌರವಿಸಿ ಸನ್ಮಾನಿಸಲಿದ್ದೇವೆ. ನಗರದ ಪಿವಿಎಸ್ ವೃತ್ತದ ಬಳಿಯ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ಎಲ್.ಕೆ.ಸುವರ್ಣ, ಕೃಷ್ಣ ಮೆನನ್ ಇದ್ದರು.
Hindu Mahasabha kept far without inviting for the consecration ceremony of Ayodhya Ram Mandir slams Rajesh Pavithran in Mangalore
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm