ಬ್ರೇಕಿಂಗ್ ನ್ಯೂಸ್
18-01-24 02:58 pm Mangalore Correspondent ಕರಾವಳಿ
ಮಂಗಳೂರು, ಜ.18: ಅಪೂರ್ಣ ರಾಮಮಂದಿರದಲ್ಲಿ ರಾಮನ ಪ್ರತಿಷ್ಠೆ ಮಾಡುವುದೇ ಹಿಂದು ಧರ್ಮಶಾಸ್ತ್ರಕ್ಕೆ ಅಪಚಾರ. ಅದರಲ್ಲೂ ರಾಮ ಜನ್ಮಭೂಮಿಗಾಗಿ ಮೊದಲು ದಾವೆ ಹೂಡಿದ್ದ ಹಿಂದು ಮಹಾಸಭಾ ಮತ್ತು ನಿರ್ಮೋಹಿ ಅಖಾಡವನ್ನು ಮಂದಿರ ಉದ್ಘಾಟನೆ ಸಂದರ್ಭದಲ್ಲಿ ದೂರ ಇಟ್ಟಿದ್ದಾರೆ. ಬಿಜೆಪಿಯಲ್ಲಿದ್ದವರನ್ನೇ ಮುಂದಿಟ್ಟು ಟ್ರಸ್ಟ್ ಮಾಡಿಕೊಂಡಿದ್ದಾರೆ ಎಂದು ಹಿಂದು ಮಹಾಸಭಾ ಕರ್ನಾಟಕ ಇದರ ಸಂಸ್ಥಾಪಕ ರಾಜೇಶ್ ಪವಿತ್ರನ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ರಾಮನ ಮಂದಿರವನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಅಪೂರ್ಣ ಮಂದಿರದಲ್ಲಿ ರಾಮನ ಪ್ರತಿಷ್ಠೆ ಮಾಡಲು ಹೊರಟಿದ್ದು ನೋಡಿದರೆ ಇವರಿಗೆ ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ಭಯ ಇದೆಯೇ ಎನ್ನುವ ಶಂಕೆ ಬರುತ್ತಿದೆ. ಹಿಂದು ಸಮಾಜವನ್ನು ಪ್ರತಿನಿಧಿಸುತ್ತೇವೆಂದು ಹೇಳಿ ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರೇ ಆಗಿರುವ ಸಂಸದ ಸುಬ್ರಹ್ಮಣ್ಯನ್ ಸ್ವಾಮಿ, ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಿ ಎಂದು ಪ್ರಧಾನಿ ಮೋದಿ ಮುಂದೆ ಪ್ರಸ್ತಾಪ ಇಟ್ಟಿದ್ದಾರೆ. ಇವರಿಗೆ ನೈತಿಕತೆ ಇರುತ್ತಿದ್ದರೆ ರಾಮ ಸೇತು ಘೋಷಣೆ ಮಾಡಬಹುದಿತ್ತು. ಅದರಲ್ಲಿ ಲಾಭವನ್ನಷ್ಟೇ ನೋಡುತ್ತಿದ್ದಾರೆ. ರಾಮನ ಬಗ್ಗೆ ನಿಷ್ಠೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಭಗವಾನ್ ರಾಮನನ್ನು ಚುನಾವಣಾ ಸರಕನ್ನಾಗಿ ಮಾಡಿಕೊಂಡಿರುವ ಬಿಜೆಪಿಗೆ ರಾಮನ ಶಾಪ ತಟ್ಟಲಿದೆ ಎಂದು ಹೇಳಿದ ರಾಜೇಶ್ ಪವಿತ್ರನ್, ಜನವರಿ 22ರಂದು ಸರಕಾರದ ನೇತೃತ್ವದಲ್ಲೇ ರಾಮನ ಪ್ರತಿಷ್ಠೆ ಆಗುತ್ತಿದ್ದು ನಾವದನ್ನು ಅನಿವಾರ್ಯ ಎಂಬಂತೆ ಸಂಭ್ರಮಿಸುತ್ತೇವೆ. ಅದರ ಅಂಗವಾಗಿ ಜನವರಿ 22ರಂದು ಬೆಳಗ್ಗೆ ರಾಮನ ಮಂದಿರಕ್ಕಾಗಿ ಶ್ರಮಿಸಿದ ಕರಸೇವಕರನ್ನು ಗೌರವಿಸಿ ಸನ್ಮಾನಿಸಲಿದ್ದೇವೆ. ನಗರದ ಪಿವಿಎಸ್ ವೃತ್ತದ ಬಳಿಯ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ಎಲ್.ಕೆ.ಸುವರ್ಣ, ಕೃಷ್ಣ ಮೆನನ್ ಇದ್ದರು.
Hindu Mahasabha kept far without inviting for the consecration ceremony of Ayodhya Ram Mandir slams Rajesh Pavithran in Mangalore
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm