ಬ್ರೇಕಿಂಗ್ ನ್ಯೂಸ್
18-01-24 02:58 pm Mangalore Correspondent ಕರಾವಳಿ
ಮಂಗಳೂರು, ಜ.18: ಅಪೂರ್ಣ ರಾಮಮಂದಿರದಲ್ಲಿ ರಾಮನ ಪ್ರತಿಷ್ಠೆ ಮಾಡುವುದೇ ಹಿಂದು ಧರ್ಮಶಾಸ್ತ್ರಕ್ಕೆ ಅಪಚಾರ. ಅದರಲ್ಲೂ ರಾಮ ಜನ್ಮಭೂಮಿಗಾಗಿ ಮೊದಲು ದಾವೆ ಹೂಡಿದ್ದ ಹಿಂದು ಮಹಾಸಭಾ ಮತ್ತು ನಿರ್ಮೋಹಿ ಅಖಾಡವನ್ನು ಮಂದಿರ ಉದ್ಘಾಟನೆ ಸಂದರ್ಭದಲ್ಲಿ ದೂರ ಇಟ್ಟಿದ್ದಾರೆ. ಬಿಜೆಪಿಯಲ್ಲಿದ್ದವರನ್ನೇ ಮುಂದಿಟ್ಟು ಟ್ರಸ್ಟ್ ಮಾಡಿಕೊಂಡಿದ್ದಾರೆ ಎಂದು ಹಿಂದು ಮಹಾಸಭಾ ಕರ್ನಾಟಕ ಇದರ ಸಂಸ್ಥಾಪಕ ರಾಜೇಶ್ ಪವಿತ್ರನ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ರಾಮನ ಮಂದಿರವನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಅಪೂರ್ಣ ಮಂದಿರದಲ್ಲಿ ರಾಮನ ಪ್ರತಿಷ್ಠೆ ಮಾಡಲು ಹೊರಟಿದ್ದು ನೋಡಿದರೆ ಇವರಿಗೆ ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ಭಯ ಇದೆಯೇ ಎನ್ನುವ ಶಂಕೆ ಬರುತ್ತಿದೆ. ಹಿಂದು ಸಮಾಜವನ್ನು ಪ್ರತಿನಿಧಿಸುತ್ತೇವೆಂದು ಹೇಳಿ ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರೇ ಆಗಿರುವ ಸಂಸದ ಸುಬ್ರಹ್ಮಣ್ಯನ್ ಸ್ವಾಮಿ, ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಿ ಎಂದು ಪ್ರಧಾನಿ ಮೋದಿ ಮುಂದೆ ಪ್ರಸ್ತಾಪ ಇಟ್ಟಿದ್ದಾರೆ. ಇವರಿಗೆ ನೈತಿಕತೆ ಇರುತ್ತಿದ್ದರೆ ರಾಮ ಸೇತು ಘೋಷಣೆ ಮಾಡಬಹುದಿತ್ತು. ಅದರಲ್ಲಿ ಲಾಭವನ್ನಷ್ಟೇ ನೋಡುತ್ತಿದ್ದಾರೆ. ರಾಮನ ಬಗ್ಗೆ ನಿಷ್ಠೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಭಗವಾನ್ ರಾಮನನ್ನು ಚುನಾವಣಾ ಸರಕನ್ನಾಗಿ ಮಾಡಿಕೊಂಡಿರುವ ಬಿಜೆಪಿಗೆ ರಾಮನ ಶಾಪ ತಟ್ಟಲಿದೆ ಎಂದು ಹೇಳಿದ ರಾಜೇಶ್ ಪವಿತ್ರನ್, ಜನವರಿ 22ರಂದು ಸರಕಾರದ ನೇತೃತ್ವದಲ್ಲೇ ರಾಮನ ಪ್ರತಿಷ್ಠೆ ಆಗುತ್ತಿದ್ದು ನಾವದನ್ನು ಅನಿವಾರ್ಯ ಎಂಬಂತೆ ಸಂಭ್ರಮಿಸುತ್ತೇವೆ. ಅದರ ಅಂಗವಾಗಿ ಜನವರಿ 22ರಂದು ಬೆಳಗ್ಗೆ ರಾಮನ ಮಂದಿರಕ್ಕಾಗಿ ಶ್ರಮಿಸಿದ ಕರಸೇವಕರನ್ನು ಗೌರವಿಸಿ ಸನ್ಮಾನಿಸಲಿದ್ದೇವೆ. ನಗರದ ಪಿವಿಎಸ್ ವೃತ್ತದ ಬಳಿಯ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ಎಲ್.ಕೆ.ಸುವರ್ಣ, ಕೃಷ್ಣ ಮೆನನ್ ಇದ್ದರು.
Hindu Mahasabha kept far without inviting for the consecration ceremony of Ayodhya Ram Mandir slams Rajesh Pavithran in Mangalore
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm