ಬ್ರೇಕಿಂಗ್ ನ್ಯೂಸ್
19-01-24 08:50 pm Mangalore Correspondent ಕರಾವಳಿ
ಮಂಗಳೂರು, ಜ.19; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.
ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಅಖಿಲ್ ಎಂಬಾತನಾಗಿದ್ದು, ಆತ ಕ್ರಿಸ್ತಿಯನ್ ಧರ್ಮೀಯನಾಗಿದ್ದ.
Moral Policing in Mangalore, three arrested for assulting couple at Kadri Park. Those who attacked the students are also said to be students. Kadri police who came to the spot have arrested three.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm