ಬ್ರೇಕಿಂಗ್ ನ್ಯೂಸ್
19-01-24 08:50 pm Mangalore Correspondent ಕರಾವಳಿ
ಮಂಗಳೂರು, ಜ.19; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.
ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಅಖಿಲ್ ಎಂಬಾತನಾಗಿದ್ದು, ಆತ ಕ್ರಿಸ್ತಿಯನ್ ಧರ್ಮೀಯನಾಗಿದ್ದ.
Moral Policing in Mangalore, three arrested for assulting couple at Kadri Park. Those who attacked the students are also said to be students. Kadri police who came to the spot have arrested three.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm