ಬ್ರೇಕಿಂಗ್ ನ್ಯೂಸ್
20-01-24 08:47 pm Mangalore Correspondent ಕರಾವಳಿ
ಮಂಗಳೂರು, ಜ.20: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಸೇವಾ ಕೈಂಕರ್ಯದಲ್ಲಿ ತೊಡಗಿಸಿದ್ದಾರೆ.
ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ. 22ರಂದು ಕುಂದೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಲಿದೆ.
Tenku Badagu Kala Savyasachi Natya Mayura Rakshit Shetty Padre has been selected for the prestigious Kundeshwar Samman award.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm