ಬ್ರೇಕಿಂಗ್ ನ್ಯೂಸ್
20-01-24 08:47 pm Mangalore Correspondent ಕರಾವಳಿ
ಮಂಗಳೂರು, ಜ.20: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಸೇವಾ ಕೈಂಕರ್ಯದಲ್ಲಿ ತೊಡಗಿಸಿದ್ದಾರೆ.
ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ. 22ರಂದು ಕುಂದೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಲಿದೆ.
Tenku Badagu Kala Savyasachi Natya Mayura Rakshit Shetty Padre has been selected for the prestigious Kundeshwar Samman award.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm