ಬ್ರೇಕಿಂಗ್ ನ್ಯೂಸ್
20-01-24 08:47 pm Mangalore Correspondent ಕರಾವಳಿ
ಮಂಗಳೂರು, ಜ.20: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಸೇವಾ ಕೈಂಕರ್ಯದಲ್ಲಿ ತೊಡಗಿಸಿದ್ದಾರೆ.
ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ. 22ರಂದು ಕುಂದೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಲಿದೆ.
Tenku Badagu Kala Savyasachi Natya Mayura Rakshit Shetty Padre has been selected for the prestigious Kundeshwar Samman award.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 10:54 am
HK News Staffer
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm