ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm