ಬ್ರೇಕಿಂಗ್ ನ್ಯೂಸ್
24-01-24 01:53 pm Mangalore Correspondent ಕರಾವಳಿ
ಬಂಟ್ವಾಳ, ಜ.24: ಹೆಸರಾಂತ ಯಕ್ಷಗಾನ ಕಲಾವಿದ, ಕಂಚಿನ ಕಂಠದ ಮಾತುಗಾರಿಕೆಯಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದ ನಾರಾಯಣ ಶೆಟ್ಟಿ ಕನ್ನಡ, ತುಳು ಭಾಷೆಯ ಪ್ರಸಂಗಗಳಲ್ಲಿ ಮಿಂಚು ಹರಿಸಿದ್ದರು. ಕಂಚಿನ ಕಂಠದ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಯಿಂದಾಗಿ ಪೆರುವಾಯಿ ಶೈಲಿಯೆಂದೇ ಹೆಸರಾಗಿದ್ದರು.
ಕಟೀಲು ಮೇಳದಲ್ಲಿ ಸುದೀರ್ಘ ಕಾಲ ಕಲಾವಿದರಾಗಿದ್ದ ಅವರು ರಕ್ತಬೀಜ, ಹಿರಣ್ಯಕಶಿಪು, ಕಂಸ, ಸುಂದರರಾವಣ, ಋತುಪರ್ಣ, ಹನುಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಹೀಗೆ ಹೆಚ್ಚು ರಾಕ್ಷಸ ಪಾತ್ರಗಳನ್ನು ಮಾಡಿ ರಂಗದಲ್ಲಿ ಮಿಂಚಿದ್ದರು. ಕುಂಡಾವು ಮೇಳದ ಮೂಲಕ ರಂಗ ಪ್ರವೇಶ ಮಾಡಿದ್ದ ಅವರು, ಕರ್ನಾಟಕ ಮೇಳ, ಧರ್ಮಸ್ಥಳ, ಪೊಳಲಿ, ಕದ್ರಿ, ಕುಂಬಳೆ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. 1942ರಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಜನಿಸಿದ್ದ ನಾರಾಯಣ ಶೆಟ್ಟಿ ಸುದೀರ್ಘ 50 ವರ್ಷಗಳ ಕಾಲ ಯಕ್ಷಗಾನ ಸೇವೆ ಮಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅನಾರೋಗ್ಯ ಕಾರಣದಿಂದ ತಿರುಗಾಟ ನಿಲ್ಲಿಸಿದ್ದರು. ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ತುಳು ಪ್ರಸಂಗಗಳಲ್ಲಿ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳಿಗೆ ಪ್ರಸಿದ್ಧಿ ಪಡೆದಿದ್ದರು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.
Mangalore Peruvia Narayana Shetty yakshagana artist dies at 82.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm