ಬ್ರೇಕಿಂಗ್ ನ್ಯೂಸ್
26-01-24 05:00 pm Mangalore Correspondent ಕರಾವಳಿ
ಉಳ್ಳಾಲ, ಜ.26: ಚಿಕ್ಕಮ್ಮನ ಮಗಳ ಮದುವೆಯ ಆಮಂತ್ರಣ ಪತ್ರಿಕೆಯನ್ನ ಸಂಬಂಧಿಕರು, ಊರವರಿಗೆ ಹಂಚಿದ್ದ ವ್ಯಕ್ತಿಯೋರ್ವ ದಿಢೀರ್ ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕಲ್ಲಾಪು ಬಳಿಯ ಪಾರ್ದೆ ಕಟ್ಟೆ ಎಂಬಲ್ಲಿ ನಡೆದಿದೆ.
ಮೂಲತಃ ನರಿಂಗಾನ ಗ್ರಾಮದ ಮೊಂಟೆಪದವಿನ ಮಠ ನಿವಾಸಿ ಸದ್ರಿ ಕಲ್ಲಾಪು ಪಾರ್ದೆ ಕಟ್ಟೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ನಂದಕುಮಾರ್ (38) ಆತ್ಮಹತ್ಯೆಗೈದ ದುರ್ದೈವಿ.

ತಂದೆ, ತಾಯಿಯನ್ನ ಅಗಲಿದ್ದ ನಂದಕುಮಾರ್ ಅನಾಥರಾಗಿದ್ದು ಸಮಾರಂಭಗಳಿಗೆ ಲೈಟಿಂಗ್, ಮೈಕ್ ಅಳವಡಿಸುವ ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದರು. ಕಲ್ಲಾಪು ಪಾರ್ದೆಕಟ್ಟೆಯ ಡೆನ್ನಿಸ್ ಡಿಸೋಜ ಎಂಬವರ ಮನೆಯ ಮಹಡಿಯ ಕೋಣೆಯೊಂದರಲ್ಲಿ ನಂದಕುಮಾರ್ ಕಳೆದ ಎಂಟು ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದರು.
ಡೆನ್ನಿಸ್ ಡಿ ಸೋಜಾ ಅವರ ಕುಟುಂಬವು ಮಂಗಳೂರು ನಗರದಲ್ಲಿ ವಾಸಿಸುತ್ತಿದ್ದು ಇಂದು ಯಾರದೋ ಸಾವಿನ ಅಂತ್ಯ ಕ್ರಿಯೆಗೆ ಬಂದಿದ್ದ ಡೆನ್ನಿಸ್ ಅವರು ಮಧ್ಯಾಹ್ನ ಮನೆಯ ಮಹಡಿಯ ಬಾಗಿಲು ತೆರೆದು ನೋಡಿದಾಗ ನಂದ ಕುಮಾರ್ ಕೊಠಡಿಯ ಛಾವಣಿಯ ಕಬ್ಬಿಣದ ಸಲಾಕೆಗೆ ಕೇಸರಿ ಶಾಲಿನಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಉಳ್ಳಾಲದಾದ್ಯಂತ ಮಂದಿರ, ಮಸೀದಿಗಳಿಗೆ ವಿದ್ಯುತ್ ದೀಪಾಲಂಕಾರ, ಮೈಕ್ ಅಳವಡಿಸುವ ಕಾಯಕ ಮಾಡುತ್ತಿದ್ದ ನಂದಕುಮಾರ್ ಎಲ್ಲರಿಗೂ ಪರಿಚಿತರಾಗಿದ್ದು ಸದ್ಗುಣಶೀಲರಾಗಿದ್ದರು. ಚಿಕ್ಕಮ್ಮನ ಮಗಳಿಗೆ ಫೆಬ್ರವರಿ ತಿಂಗಳಲ್ಲಿ ಮದುವೆ ನಿಗದಿಯಾಗಿದ್ದು ಆಮಂತ್ರಣ ಪತ್ರಿಕೆಗಳನ್ನ ನಂದಕುಮಾರ್ ಅವರೇ ಸಂಬಂಧಿಕರು, ಸ್ನೇಹಿತರಿಗೆ ಹಂಚಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.
38 year old man commits suicide suddnely at Naringana Ullal in Mangalore. The deceased has been identified as Nandakumar. He was busy giving Marriage invitations of his sister to all the relatives and suddnely he has taken this extreme step.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm