ಬ್ರೇಕಿಂಗ್ ನ್ಯೂಸ್
22-11-20 05:36 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 22: ರಾಜ್ಯದಲ್ಲಿ ಮೈಸೂರು ಮತ್ತು ಮಂಗಳೂರು ಸಮಾನಾಂತರವಾಗಿ ಬೆಳೆಯುತ್ತಿರುವ ಅವಳಿ ನಗರಗಳು. ಈ ನಗರಗಳ ಮಧ್ಯೆ ತುರ್ತು ಪ್ರಯಾಣಕ್ಕಾಗಿ ವಿಮಾನ ಸೌಲಭ್ಯ ಬರಬೇಕೆಂಬ ಜನರ ನಿರೀಕ್ಷೆ ಈಡೇರುತ್ತಿದೆ. ಇದೇ ಡಿಸೆಂಬರ್ 10 ರಿಂದ ಇವೆರಡು ನಗರಗಳ ಮಧ್ಯೆ ವಿಮಾನ ಸಂಚಾರ ಆರಂಭಗೊಳ್ಳಲಿದೆ.
ಉಡಾನ್ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಅಂಗ ಸಂಸ್ಥೆಯಾದ ಅಲಯನ್ಸ್ ಏರ್ ವಿಮಾನ ಮೈಸೂರು – ಮಂಗಳೂರು ಮಧ್ಯೆ ವಾರದಲ್ಲಿ ನಾಲ್ಕು ದಿನ ಸಂಚರಿಸಲಿದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ಈ ಸೇವೆ ಇರಲಿದ್ದು ಮೈಸೂರಿನಿಂದ ಬೆಳಗ್ಗೆ ಹನ್ನೊಂದಕ್ಕೆ ಹೊರಡುವ ಈ ವಿಮಾನವು ಮಂಗ್ಳೂರಿಗೆ ಮಧ್ಯಾಹ್ನ 12.15ಕ್ಕೆ ತಲುಪಲಿದೆ. ಅಲ್ಲಿಂದ ಮರಳಿ ಮಧ್ಯಾಹ್ನ 12.40ಕ್ಕೆ ಹೊರಟು 1.40ಕ್ಕೆ ಮೈಸೂರಿಗೆ ತಲುಪಲಿದೆ.


ಮಂಗಳೂರು ಮೂಲದ ಸುಮಾರು ಅರುವತ್ತು ಸಾವಿರ ಕುಟುಂಬಗಳು ಮೈಸೂರಿನಲ್ಲಿ ವಾಸವಿದ್ದು ಈ ಹಿನ್ನೆಲೆಯಲ್ಲಿ ಎರಡೂ ನಗರಗಳ ನಡುವೆ ವಿಮಾನ ಹಾರಾಟ ಆರಂಭಿಸುವಂತೆ ಹಲವು ಸಂಘ ಸಂಸ್ಥೆಗಳು, ವಾಣಿಜ್ಯೋದ್ಯಮಿಗಳು ಸೇರಿದಂತೆ ಪ್ರಮುಖರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ ನಲ್ಲಿಯೇ ಈ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭಿಸುವುದಾಗಿ ಏರ್ ಇಂಡಿಯಾ ಪ್ರಕಟಿಸಿತ್ತು. ಆದರೆ ಅನುಮತಿ ದೊರೆತಿರಲಿಲ್ಲ. ಹೀಗಾಗಿ ವಿಮಾನ ಸಂಚಾರ ವಿಳಂಬವಾಗಿತ್ತು. ಇದೀಗ ಹಸಿರು ನಿಶಾನೆ ದೊರೆತಿದ್ದು ಉಭಯ ಜಿಲ್ಲೆಗಳ ಪ್ರಯಾಣಿಕರಿಗೆ ಸಂತಸವಾಗಿದೆ.
Video:
Thank you beloved PM @narendramodi ji and @HardeepSPuri Sir. ALLIANCE AIR COMMENCES FLIGHT OPERATIONS CONNECTING MYSURU TO MANGALORE EFFECTIVE 10TH DECEMBER 2020
— Pratap Simha (@mepratap) November 21, 2020
The flight will operate on Wednesday, Friday, Saturday & Sunday.
Want to fly from Mysuru to Mangaluru? Very soon!
— Pratap Simha (@mepratap) November 21, 2020
Air India to commence it's operations from Mangalore to Mysore from December 10th, 2020.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm