ಬ್ರೇಕಿಂಗ್ ನ್ಯೂಸ್
29-01-24 05:03 pm Mangalore Correspondent ಕರಾವಳಿ
ಮಂಗಳೂರು, ಜ.29 : ಮುಂದಿನ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ರಾಷ್ಟ್ರೀಯ ಹಿಂದುಳಿದ ವರ್ಗದ ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಅವಕಾಶ ನೀಡಬೇಕೆಂದು ಅಖಿಲ ಭಾರತ ಮೀನುಗಾರರ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
2019ರ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ. ರಾಜ್ಯದ ಜನಸಂಖ್ಯೆಯು 50 ಶೇ.ದಷ್ಟಿದ್ದರೂ ಒಬಿಸಿ ಅಭ್ಯರ್ಥಿಗಳಿಗೆ ಒಂದೇ ಒಂದು ಸೀಟು ನೀಡಿಲ್ಲವಾದ್ದರಿಂದ ಬಿಜೆಪಿಗೆ ಒಬಿಸಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿರುತ್ತದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೊಂಡಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮೀನುಗಾರರು ಮಹತ್ವದ ಸವಾಲುಗಳನ್ನು ಎದುರಿಸುತ್ತಿದ್ದು, ರಾಜಕೀಯ ವೇದಿಕೆಗಳಲ್ಲಿ ಮನ್ನಣೆ ಹಾಗೂ ಪ್ರಾತಿನಿಧ್ಯವನ್ನು ಪಡೆಯಲು ದೀರ್ಘ ಕಾಲ ಹೋರಾಡುತ್ತಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಮೀನುಗಾರರ ಸಮಸ್ಯೆಗಳ ನಿವಾರಣೆ ಮತ್ತು ಮೀನುಗಾರಿಕೆಯ ಸರ್ವಾಂಗೀಣ ಅಭಿವೃದ್ಧಿಗೆ ಸಂಸತ್ತಿನಲ್ಲಿ ಮೀನುಗಾರರ ಪ್ರತಿನಿಧಿಯನ್ನು ಇರುವುದು ಬಹಳ ಮುಖ್ಯವಾಗಿದೆ. ಪ್ರಮೋದ್ ಮಧ್ವರಾಜ್ 12 ವರ್ಷಗಳಿಂದ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ, 13 ವರ್ಷಗಳಿಂದ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾಗಿ, 6 ವರ್ಷಗಳಿಂದ ರಾಷ್ಟ್ರೀಯ ಮೀನುಗಾರರ ವೇದಿಕೆಯ ಕಾರ್ಯದರ್ಶಿಯಾಗಿ ಗುರುತಿಸಿದ್ದಾರೆ. ನಾಡಿನ ಸಮಸ್ಯೆ ಬಗ್ಗೆ ತಿಳಿದಿರುವ ಇಂತಹ ವ್ಯಕ್ತಿಯೇ ನಮ್ಮ ಕರಾವಳಿಗೆ ಸಂಸದರಾಗಬೇಕು ಎಂದು ಮೀನುಗಾರ ಮುಖಂಡ ಮೋಹನ್ ಬೆಂಗ್ರೆ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಮೀನುಗಾರಿಕೆಯನ್ನು ಆಧುನೀಕರಣಗೊಳಿಸಿ ಅಭಿವೃದ್ಧಿ ಪಡಿಸುವುದು, ರಾಜ್ಯದ ಕಡಲ ಕಿನಾರೆ ಹಾಗೂ ಪ್ರಾಕೃತಿಕ ಸೌಂದರ್ಯವನ್ನು ಆಕರ್ಷಣೀಯ ಪ್ರವಾಸಿ ತಾಣಗಳನ್ನಾಗಿ
ಅಭಿವೃದ್ಧಿಪಡಿಸುವುದು, ಮಾಹಿತಿ ತಂತ್ರಜ್ಞಾನ ಕೇಂದ್ರ ನಿರ್ಮಾಣ ಮಾಡಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕಿದ್ದು ಪ್ರಮೋದ್ ಮಧ್ವರಾಜ್ ಸಂಸದರಾದಲ್ಲಿ ಮೀನುಗಾರ ಸಮಾಜ ಅವರನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದವರು ಹೇಳಿದರು. ಕಿಶೋರ್ ಸುವರ್ಣ ಮತ್ತಿತರರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Bjp MP udupi chikmagaluru ticket to Pramod Madhwaraj must be given, high demand from fishing community.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm