ಬ್ರೇಕಿಂಗ್ ನ್ಯೂಸ್
29-01-24 10:50 pm Mangalore Correspondent ಕರಾವಳಿ
ಮಂಗಳೂರು, ಜ.29: ನಗರದ ಮಂಗಳಾ ಕ್ರೀಡಾಂಗಣದ ಬಳಿ ಏರ್ಪಡಿಸಿದ್ದ ಆಹಾರ ಉತ್ಸವದಲ್ಲಿ ಬೀದಿ ಬದಿ ವ್ಯಾಪಾರ ನಿಯಮಾವಳಿಯನ್ನು ಸಂಪೂರ್ಣ ಉಲ್ಲಂಘಿಸಿ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಆರೋಪಿಸಿದೆ.
ಆಹಾರ ಉತ್ಸವದ ಪರಿಸರದಲ್ಲಿ ದಿನನಿತ್ಯ ಬೀದಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ಬಲವಂತವಾಗಿ ಸ್ಟಾಲ್ ಗಳನ್ನು ಹಾಕಿಸಿ 20% ಕಮಿಷನ್ ಪಡೆಯಲು ದುಪ್ಪಟ್ಟು ದರಗಳಿಗೆ ಆಹಾರ ಮಾರಾಟ ಮಾಡಿಸಿರುತ್ತಾರೆ. ಅಲ್ಲದೆ ಬೀದಿ ಬದಿಯಲ್ಲಿ ಆಹಾರ ಮಾರಾಟದ ದರಗಳನ್ನು ಪಂಚತಾರಾ ಹೋಟೆಲುಗಳ ರೀತಿ ವಿಧಿಸಿ ಸಾರ್ವಜನಿಕರ ಜೇಬಿಗೂ ಕತ್ತರಿ ಹಾಕಲಾಗಿದೆ. ಬೀದಿ ಆಹಾರ ಮಾರಾಟಗಾರರಿಗೆ ತರಬೇತಿ ನೀಡಿ ಪ್ರಮಾಣ ಪತ್ರ ನೀಡಬೇಕಾದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದವರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಪ್ರಮಾಣ ಪತ್ರ ನೀಡಿರುತ್ತಾರೆ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘ ಆರೋಪಿಸಿದೆ.

ಬಡ ಬೀದಿ ವ್ಯಾಪಾರಿಗಳು ತಮ್ಮ ಹೊಟ್ಟೆಪಾಡಿಗಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಿದರೆ ಕಾರ್ಯಾಚರಣೆ ಮಾಡುವ ಪಾಲಿಕೆ ಅಧಿಕಾರಿಗಳು, ಕೇಸು ದಾಖಲಿಸುವ ಪೊಲೀಸರು ರಸ್ತೆ ಸಂಚಾರವನ್ನೇ ನಿಷೇಧಿಸಿ ಆಹಾರ ಉತ್ಸವ ನಡೆಸಲು ಅವಕಾಶ ಕೊಟ್ಟಿರುವುದು ಎಷ್ಟು ಸರಿ? ಬಡ ಬೀದಿ ವ್ಯಾಪಾರಿಗಳಿಗೆ ಒಂದು ನ್ಯಾಯ, ರಾಜಕೀಯ ಪ್ರಭಾವಿ ಕಮಿಷನ್ ದಂಧೆಕೋರರಿಗೆ ಸಾರ್ವಜನಿಕ ರಸ್ತೆಗಳನ್ನೇ ಅಕ್ರಮವಾಗಿ ವ್ಯಾಪಾರಕ್ಕೆ ಬಳಸಿಕೊಂಡು ಕಾನೂನು ನಿಯಮ ಮೀರಿರುವ ಬಲಾಢ್ಯರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪೊಲೀಸರೇ ಕಾವಲು ನಿಂತು ವ್ಯಾಪಾರಕ್ಕೆ ಅನುಕೂಲತೆ ಮಾಡಿಕೊತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿಕೆ ಇಮ್ತಿಯಾಝ್, ಬೀದಿ ಬದಿ ವ್ಯಾಪಾರ ನಿಯಮಾವಳಿ ಉಲ್ಲಂಘನೆ ಮಾಡಿರುವ ಬಗ್ಗೆ ಪಾಲಿಕೆ ಆಯುಕ್ತರಿಗೆ ವಾರದ ಹಿಂದೆಯೇ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರೂ ರಾಜಕೀಯ ಪ್ರಭಾವದಿಂದಾಗಿ ಕ್ರಮ ಕೈಗೊಂಡಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Dakshin Kannada Street vendors association allege of violation of rules during food fest in Mangalore 2024. 20 percent commision has been taken ever poor food stall owners. The association has requested the Mangalore city commissioner to take necessary action.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm