ಬ್ರೇಕಿಂಗ್ ನ್ಯೂಸ್
29-01-24 10:50 pm Mangalore Correspondent ಕರಾವಳಿ
ಮಂಗಳೂರು, ಜ.29: ನಗರದ ಮಂಗಳಾ ಕ್ರೀಡಾಂಗಣದ ಬಳಿ ಏರ್ಪಡಿಸಿದ್ದ ಆಹಾರ ಉತ್ಸವದಲ್ಲಿ ಬೀದಿ ಬದಿ ವ್ಯಾಪಾರ ನಿಯಮಾವಳಿಯನ್ನು ಸಂಪೂರ್ಣ ಉಲ್ಲಂಘಿಸಿ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಆರೋಪಿಸಿದೆ.
ಆಹಾರ ಉತ್ಸವದ ಪರಿಸರದಲ್ಲಿ ದಿನನಿತ್ಯ ಬೀದಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ಬಲವಂತವಾಗಿ ಸ್ಟಾಲ್ ಗಳನ್ನು ಹಾಕಿಸಿ 20% ಕಮಿಷನ್ ಪಡೆಯಲು ದುಪ್ಪಟ್ಟು ದರಗಳಿಗೆ ಆಹಾರ ಮಾರಾಟ ಮಾಡಿಸಿರುತ್ತಾರೆ. ಅಲ್ಲದೆ ಬೀದಿ ಬದಿಯಲ್ಲಿ ಆಹಾರ ಮಾರಾಟದ ದರಗಳನ್ನು ಪಂಚತಾರಾ ಹೋಟೆಲುಗಳ ರೀತಿ ವಿಧಿಸಿ ಸಾರ್ವಜನಿಕರ ಜೇಬಿಗೂ ಕತ್ತರಿ ಹಾಕಲಾಗಿದೆ. ಬೀದಿ ಆಹಾರ ಮಾರಾಟಗಾರರಿಗೆ ತರಬೇತಿ ನೀಡಿ ಪ್ರಮಾಣ ಪತ್ರ ನೀಡಬೇಕಾದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದವರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಪ್ರಮಾಣ ಪತ್ರ ನೀಡಿರುತ್ತಾರೆ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘ ಆರೋಪಿಸಿದೆ.

ಬಡ ಬೀದಿ ವ್ಯಾಪಾರಿಗಳು ತಮ್ಮ ಹೊಟ್ಟೆಪಾಡಿಗಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಿದರೆ ಕಾರ್ಯಾಚರಣೆ ಮಾಡುವ ಪಾಲಿಕೆ ಅಧಿಕಾರಿಗಳು, ಕೇಸು ದಾಖಲಿಸುವ ಪೊಲೀಸರು ರಸ್ತೆ ಸಂಚಾರವನ್ನೇ ನಿಷೇಧಿಸಿ ಆಹಾರ ಉತ್ಸವ ನಡೆಸಲು ಅವಕಾಶ ಕೊಟ್ಟಿರುವುದು ಎಷ್ಟು ಸರಿ? ಬಡ ಬೀದಿ ವ್ಯಾಪಾರಿಗಳಿಗೆ ಒಂದು ನ್ಯಾಯ, ರಾಜಕೀಯ ಪ್ರಭಾವಿ ಕಮಿಷನ್ ದಂಧೆಕೋರರಿಗೆ ಸಾರ್ವಜನಿಕ ರಸ್ತೆಗಳನ್ನೇ ಅಕ್ರಮವಾಗಿ ವ್ಯಾಪಾರಕ್ಕೆ ಬಳಸಿಕೊಂಡು ಕಾನೂನು ನಿಯಮ ಮೀರಿರುವ ಬಲಾಢ್ಯರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪೊಲೀಸರೇ ಕಾವಲು ನಿಂತು ವ್ಯಾಪಾರಕ್ಕೆ ಅನುಕೂಲತೆ ಮಾಡಿಕೊತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿಕೆ ಇಮ್ತಿಯಾಝ್, ಬೀದಿ ಬದಿ ವ್ಯಾಪಾರ ನಿಯಮಾವಳಿ ಉಲ್ಲಂಘನೆ ಮಾಡಿರುವ ಬಗ್ಗೆ ಪಾಲಿಕೆ ಆಯುಕ್ತರಿಗೆ ವಾರದ ಹಿಂದೆಯೇ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರೂ ರಾಜಕೀಯ ಪ್ರಭಾವದಿಂದಾಗಿ ಕ್ರಮ ಕೈಗೊಂಡಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Dakshin Kannada Street vendors association allege of violation of rules during food fest in Mangalore 2024. 20 percent commision has been taken ever poor food stall owners. The association has requested the Mangalore city commissioner to take necessary action.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm