ಬ್ರೇಕಿಂಗ್ ನ್ಯೂಸ್
30-01-24 08:17 pm Mangalore Correspondent ಕರಾವಳಿ
ಮಂಗಳೂರು, ಜ.30: ಕಾಶ್ಮೀರದಲ್ಲಿ ಲಾಲ್ ಚೌಕದಲ್ಲಿ ಧೈರ್ಯ ಇದ್ದವರು ರಾಷ್ಟ್ರ ಧ್ವಜ ಹಾರಿಸಿ ಎಂದಿದ್ದರು. ಆಗ ನಾವು ಬಿಜೆಪಿಯವರು ರಾಷ್ಟ್ರ ಧ್ವಜ ಹಾರಿಸಿದ್ದು, ಕಾಂಗ್ರೆಸಿನವರು ಎಲ್ಲಿದ್ದರು ? ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದು ಯಾರು? ಅಲ್ಲಿ ನಾವು ರಾಷ್ಟ್ರ ಧ್ವಜ ಹಾರಿಸಿದಾಗ ಲಾಠಿಚಾರ್ಜ್ ಮಾಡಿದ್ರಲ್ಲಾ ಕಾಂಗ್ರೆಸಿಗರು. ಇವರ ರಾಷ್ಟ್ರ ಧ್ವಜದ ಮೇಲಿನ ಪ್ರೇಮ ಆಗ ಎಲ್ಲಿತ್ತು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರೇ 50 ರೂ.ನಂತೆ ಸಂಗ್ರಹಿಸಿ ಆರು ಲಕ್ಷ ವೆಚ್ಚದಲ್ಲಿ ಧ್ವಜಸ್ತಂಭ ಏರಿಸಿದ್ದರು. ತಿಂಗಳ ಕಾಲ ಧ್ವಜಸ್ತಂಭದ ಕೆಲಸ ಮಾಡಿದ್ದರು. ಆದರೆ ಅಲ್ಲಿ ರಾಮನ ಮಂದಿರದ ನೆನಪಲ್ಲಿ ಕೇಸರಿ ಬಣ್ಣದ ಹನುಮ ಧ್ವಜ ಏರಿಸಿದ್ದನ್ನು ಸಿದ್ದರಾಮಯ್ಯರಿಗೆ ಸಹಿಸಕ್ಕಾಗಿಲ್ಲ.
ಇವರಿಗೆ ಈಗ ರಾಷ್ಟ್ರ ಧ್ವಜದ ಮೇಲೆ ಅಭಿಮಾನ ಉಕ್ಕಿ ಹರಿದಿದೆ. ರಾಷ್ಟ್ರ ಧ್ವಜದ ಅಭಿಯಾನ ಮಾಡುತ್ತಾರಂತೆ. ಆದರೆ ರಾಷ್ಟ್ರ ಧ್ವಜದ ಪ್ರಶ್ನೆ ಬಂದಾಗ, ಇವರೆಲ್ಲ ಸುಮ್ಮನಿದ್ದರು ಎನ್ನೋದನ್ನು ನಾವು ಪ್ರಶ್ನೆ ಮಾಡಲೇಬೇಕು.
ಸಿದ್ದರಾಮಯ್ಯ ತನ್ನ ಹೆಸರಲ್ಲಿ ರಾಮ ಇದೆ ಅಂತಾರೆ. ಹೆಸರಲ್ಲಿ ರಾಮ ಇದ್ದರೇನು, ಹೃದಯದಲ್ಲಿ ಟಿಪ್ಪು ಟಿಪ್ಪು ಅಂತಿದ್ದೀರಲ್ಲಾ ನೀವು. ವೀರಪ್ಪನ್ ಹೆಸರಿನಲ್ಲಿ ವೀರ ಮತ್ತು ಅಪ್ಪ ಎಂಬ ಹೆಸರು ಇದ್ದಂತೆ. ವೀರಪ್ಪನ್ ಅಂದ್ರೆ ಡಕಾಯಿತರು, ಕಳ್ಳರಿಗೆಲ್ಲ ಲೀಡರ್ ಆಗಿದ್ದವ ಎಂದು ಅಶೋಕ್ ವ್ಯಂಗ್ಯವಾಡಿದರು.
ಲೋಕಸಭೆ ಚುನಾವಣೆ ಗೆಲುವೇ ನಮ್ಮ ಗುರಿ. ಲೋಕಸಭೆಯಲ್ಲಿ 28ಕ್ಕೆ 28 ಸ್ಥಾನ ಗೆದ್ದರೆ ಈ ಸರ್ಕಾರ ಒಂದು ತಿಂಗಳು ಇರಲ್ಲ. ಅಲ್ಲಿದ್ದವರೇ ಈ ಸರ್ಕಾರ ಇರಬಾರದು ಅಂತ ಬಿಟ್ಟು ಬರ್ತಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕೊಡುವ ಉತ್ತರವೇ ಇವರಿಗೆ ಕೊನೆ ಮೊಳೆಯಾಗಲಿದೆ. ಅದಕ್ಕಾಗಿ ನಾವು ಸಜ್ಜಾಗಬೇಕಿದೆ ಎಂದು ಅಶೋಕ್ ಹೇಳಿದರು.
Mangalore R Ashok slams congress during Bjp Satish Kumpala being district president. He questioned which government was there during national flag being placed at Idgah maiden.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm