ಬ್ರೇಕಿಂಗ್ ನ್ಯೂಸ್
02-02-24 01:47 pm Mangalore Correspondent ಕರಾವಳಿ
ಉಳ್ಳಾಲ, ಫೆ.2: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಸಾಗುತ್ತಿದ್ದ ಟ್ರಾಲ್ ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರ ಮಧ್ಯದಲ್ಲಿದ್ದ ಕಲ್ಲಿಗೆ ಬಡಿದು ಮುಳುಗಿದ್ದು, ಅಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಎರಡು ಬೋಟ್ನ ಮೀನುಗಾರರು ಮುಳುಗುತ್ತಿದ್ದ ಬೋಟ್ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ.
ಮುಳುಗಡೆಯಾಗಿರುವ ಬೋಟ್ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು ಬೋಟ್ಗೂ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ `ನವಾಮಿ - ಶಿವಾನಿ' ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ಚಲಾಯಿಸುತ್ತಿದ್ದ ನಯನಾ ಅವರ ಪತಿ ಪ್ರವೀಣ್ ಸುವರ್ಣ, ಉತ್ತರ ಪ್ರದೇಶದ ಮೀನುಗಾರರಾದ ಸಮರ ಬಹದ್ದೂರ್, ರಾಮ್ ಮನೋಜ್, ರೋಹಿತ್, ಪ್ರಕಾಶ್, ವಾಸು ಅವರಲ್ಲಿ ಮೂವರನ್ನು ನಾಡದೋಣಿಯಲ್ಲಿ ಆಗಮಿಸಿದ ರಾಮ ಸುವರ್ಣ ಮತ್ತು ಯತೀಶ್ ಸುವರ್ಣ ರಕ್ಷಿಸಿದರೆ, ಉಳಿದ ಇಬ್ಬರನ್ನು ಮತ್ತು ಬೋಟನ್ನು ಪ್ರಕಾಶ್ ಖಾರ್ವಿ ಮಾಲಕತ್ವದ ದುರ್ಗಾ ಲಕ್ಷ್ಮಿ ಮತ್ತು ಮನೋಜ್ ಖಾರ್ವಿ ಮಾಲಕತ್ವದ ಶ್ರೀಗೌರಿ ಬೋಟ್ನ ಮೀನುಗಾರರು ರಕ್ಷಿಸಿದ್ದಾರೆ.

ಗುರುವಾರ ಸಂಜೆ ಪ್ರವೀಣ್ ಸುವರ್ಣ ಸೇರಿದಂತೆ ಉತ್ತರ ಪ್ರದೇಶದ ಐವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಇಂದು ನಸುಕಿನ ಜಾವ ನಾಲ್ಕು ಗಂಟೆಗೆ ಮೀನುಗಾರಿಕೆ ಮುಗಿಸಿ ಮೀನಿನೊಂದಿಗೆ ಉಳ್ಳಾಲ ಸಮುದ್ರ ತೀರದ ಮೂಲಕ ದಡಕ್ಕೆ ಆಗಮಿಸುತ್ತಿದ್ದರು. ಈ ಸಂದರ್ಭದಲ್ಲಿ ಬೋಟ್ನ ಪ್ರೊಪೆಲರ್ ಗೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ ಪ್ರೊಫೆಲರ್ ನಿಂತಿದ್ದು, ಬೆಳಗಿನ ಜಾವ ಸಮುದ್ರ ಇಳಿತದಿಂದ ಸಮುದ್ರದಲ್ಲಿ ನಿಂತಿದ್ದ ಬೋಟ್ ಸಮುದ್ರದ ತೆರೆಗಳ ಹೊಡೆತಕ್ಕೆ ಕಡಲ್ಕೊರೆತದ ಶಾಶ್ವತ ಕಾಮಗಾರಿಯಾದ ರೀಫ್ ಬಳಿ ಹಾಕಿದ್ದ ಸರ್ವೇ ಕಲ್ಲಿಗೆ ಬಡಿದು ಬೋಟ್ ಮುಳುಗಲು ಆರಂಭಗೊಂಡಿದೆ. ಹಡಗು ಮುಳುಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಮೀನುಗಾರಿಕೆಗೆ ತೆರಳಿದ್ದ ದುರ್ಗಾಲಕ್ಷ್ಮೀ ಮತ್ತು ಶ್ರೀ ಗೌರಿ ಬೋಟ್ನ ಮೀನುಗಾರರು ಮುಳುಗುತ್ತಿದ್ದವರನ್ನ ರಕ್ಷಿಸಿ, ಬೋಟನ್ನು ಸಮುದ್ರ ಕಿನಾರೆಗೆ ಎಳೆದೊಯ್ದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishing boat capsizes at ullal in Mangalore, five rescued
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm