ಬ್ರೇಕಿಂಗ್ ನ್ಯೂಸ್
02-02-24 01:47 pm Mangalore Correspondent ಕರಾವಳಿ
ಉಳ್ಳಾಲ, ಫೆ.2: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಸಾಗುತ್ತಿದ್ದ ಟ್ರಾಲ್ ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರ ಮಧ್ಯದಲ್ಲಿದ್ದ ಕಲ್ಲಿಗೆ ಬಡಿದು ಮುಳುಗಿದ್ದು, ಅಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಎರಡು ಬೋಟ್ನ ಮೀನುಗಾರರು ಮುಳುಗುತ್ತಿದ್ದ ಬೋಟ್ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ.
ಮುಳುಗಡೆಯಾಗಿರುವ ಬೋಟ್ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು ಬೋಟ್ಗೂ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ `ನವಾಮಿ - ಶಿವಾನಿ' ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ಚಲಾಯಿಸುತ್ತಿದ್ದ ನಯನಾ ಅವರ ಪತಿ ಪ್ರವೀಣ್ ಸುವರ್ಣ, ಉತ್ತರ ಪ್ರದೇಶದ ಮೀನುಗಾರರಾದ ಸಮರ ಬಹದ್ದೂರ್, ರಾಮ್ ಮನೋಜ್, ರೋಹಿತ್, ಪ್ರಕಾಶ್, ವಾಸು ಅವರಲ್ಲಿ ಮೂವರನ್ನು ನಾಡದೋಣಿಯಲ್ಲಿ ಆಗಮಿಸಿದ ರಾಮ ಸುವರ್ಣ ಮತ್ತು ಯತೀಶ್ ಸುವರ್ಣ ರಕ್ಷಿಸಿದರೆ, ಉಳಿದ ಇಬ್ಬರನ್ನು ಮತ್ತು ಬೋಟನ್ನು ಪ್ರಕಾಶ್ ಖಾರ್ವಿ ಮಾಲಕತ್ವದ ದುರ್ಗಾ ಲಕ್ಷ್ಮಿ ಮತ್ತು ಮನೋಜ್ ಖಾರ್ವಿ ಮಾಲಕತ್ವದ ಶ್ರೀಗೌರಿ ಬೋಟ್ನ ಮೀನುಗಾರರು ರಕ್ಷಿಸಿದ್ದಾರೆ.

ಗುರುವಾರ ಸಂಜೆ ಪ್ರವೀಣ್ ಸುವರ್ಣ ಸೇರಿದಂತೆ ಉತ್ತರ ಪ್ರದೇಶದ ಐವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಇಂದು ನಸುಕಿನ ಜಾವ ನಾಲ್ಕು ಗಂಟೆಗೆ ಮೀನುಗಾರಿಕೆ ಮುಗಿಸಿ ಮೀನಿನೊಂದಿಗೆ ಉಳ್ಳಾಲ ಸಮುದ್ರ ತೀರದ ಮೂಲಕ ದಡಕ್ಕೆ ಆಗಮಿಸುತ್ತಿದ್ದರು. ಈ ಸಂದರ್ಭದಲ್ಲಿ ಬೋಟ್ನ ಪ್ರೊಪೆಲರ್ ಗೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ ಪ್ರೊಫೆಲರ್ ನಿಂತಿದ್ದು, ಬೆಳಗಿನ ಜಾವ ಸಮುದ್ರ ಇಳಿತದಿಂದ ಸಮುದ್ರದಲ್ಲಿ ನಿಂತಿದ್ದ ಬೋಟ್ ಸಮುದ್ರದ ತೆರೆಗಳ ಹೊಡೆತಕ್ಕೆ ಕಡಲ್ಕೊರೆತದ ಶಾಶ್ವತ ಕಾಮಗಾರಿಯಾದ ರೀಫ್ ಬಳಿ ಹಾಕಿದ್ದ ಸರ್ವೇ ಕಲ್ಲಿಗೆ ಬಡಿದು ಬೋಟ್ ಮುಳುಗಲು ಆರಂಭಗೊಂಡಿದೆ. ಹಡಗು ಮುಳುಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಮೀನುಗಾರಿಕೆಗೆ ತೆರಳಿದ್ದ ದುರ್ಗಾಲಕ್ಷ್ಮೀ ಮತ್ತು ಶ್ರೀ ಗೌರಿ ಬೋಟ್ನ ಮೀನುಗಾರರು ಮುಳುಗುತ್ತಿದ್ದವರನ್ನ ರಕ್ಷಿಸಿ, ಬೋಟನ್ನು ಸಮುದ್ರ ಕಿನಾರೆಗೆ ಎಳೆದೊಯ್ದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishing boat capsizes at ullal in Mangalore, five rescued
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm