ಬ್ರೇಕಿಂಗ್ ನ್ಯೂಸ್
02-02-24 08:32 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಬಲವಂತದಿಂದ ತೆರವುಗೊಳಿಸಿದ್ದು ಹಿಂದುಗಳ ಭಾವನೆಗೆ ನೋವು ಕೊಟ್ಟಿದೆ. ಹೀಗಾಗಿ ಹಿಂದು ಸಮಾಜದಲ್ಲಿ ವಿಶ್ವಾಸ ತುಂಬಿಸಲು ರಾಜ್ಯಾದ್ಯಂತ ಹಿಂದು ಮನೆಗಳಲ್ಲಿ ಹನುಮ ಧ್ವಜ ಹಾಕಲು ಕರೆ ಕೊಟ್ಟಿದ್ದೇವೆ. ಅಲ್ಲದೆ, ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಹನುಮ ಧ್ವಜ ಅಭಿಯಾನ ನಡೆಸುತ್ತೇವೆ. ಫೆ.9ರ ವರೆಗೆ ಹನುಮ ಧ್ವಜ ಅಭಿಯಾನ ನಡೆಯಲಿದ್ದು, ಫೆ.10ರಂದು ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಿ ಪ್ರತಿಭಟನೆ ನಡೆಸಲಾಗುವುದು ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್ ಹೇಳಿದ್ದಾರೆ.
ಕದ್ರಿಯ ವಿಶ್ವ ಹಿಂದು ಪರಿಷತ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕೆರಗೋಡು ಗ್ರಾಮದಲ್ಲಿ ಗ್ರಾಮಸ್ಥರೇ ಹಣ ವ್ಯಯಿಸಿ ಹನುಮಧ್ವಜ ಸ್ಥಾಪನೆ ಮಾಡಿದ್ದರು. ರಾಜ್ಯದ ಕಾಂಗ್ರೆಸ್ ಸರಕಾರ ಮುಸ್ಲಿಮರಿಗೆ ನೋವಾಗುತ್ತೆ ಎಂದು ಹೇಳಿ ಧ್ವಜ ತೆರವು ಮಾಡಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತಿದ್ದು, ಹಿಂದು ಸಮಾಜಕ್ಕೆ ನೋವು ಕೊಟ್ಟಿರುವುದನ್ನು ಸಹಿಸುವುದಿಲ್ಲ. ಇದನ್ನು ಪ್ರತಿಭಟಿಸಿ ರಾಜ್ಯಾದ್ಯಂತ ಹಿಂದು ಮನೆಗಳಲ್ಲಿ ಸ್ವಯಂಪ್ರೇರಿತವಾಗಿ ಹನುಮ ಧ್ವಜ ಹಾಕಲಿದ್ದಾರೆ. ಫೆ.9 ಅಥವಾ 10ರಂದು ಸಾಮೂಹಿಕವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.
ಮಳಲಿ ಮಸೀದಿಯ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಈಗಾಗಲೇ ಕೋರ್ಟಿನಲ್ಲಿ ವಿಚಾರಣೆ ಆಗ್ತಾ ಇದೆ. ಅದು ನಮ್ಮ ಪರವಾಗಿಯೇ ತೀರ್ಪು ಬರುತ್ತೆ ಎನ್ನುವ ವಿಶ್ವಾಸದಲ್ಲಿದ್ದೇವೆ. ಜ್ಞಾನವಾಪಿ ಮಸೀದಿ ರೀತಿಯಲ್ಲೇ ಎಎಸ್ಐ ಸರ್ವೆ ಆಗಬೇಕೆಂದು ನಾವು ಒತ್ತಾಯ ಮಾಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ನೀಡಿರುವ ಪ್ರತ್ಯೇಕ ರಾಷ್ಟ್ರದ ಕುರಿತ ಪ್ರಶ್ನೆಗೆ, ನಾವು ಅಖಂಡ ಭಾರತದ ಸಂಕಲ್ಪ ಹೊಂದಿರುವವರು. ಬಜರಂಗದಳ ಸ್ಥಾಪನೆ ದಿನದಿಂದಲೇ ಪ್ರತಿವರ್ಷ ಆಗಸ್ಟ್ 14ರಂದು ಅಖಂಡ ಭಾರತ ಸಂಕಲ್ಪ ಮಾಡುತ್ತೇವೆ. ಅನುದಾನದ ವಿಚಾರದಲ್ಲಿ ಪ್ರಶ್ನೆ ಇದ್ದರೆ, ಅದನ್ನು ಕೇಳಬೇಕು ವಿನಾ ದೇಶ ಒಡೆಯುವ ಮಾತನ್ನಾಡಿದ್ದು ತಪ್ಪು. ನಾವದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಪುರುಷೋತ್ತಮ್, ಭುಜಂಗ ಕುಲಾಲ್, ಪುನೀತ್ ಅತ್ತಾವರ್ ಮತ್ತಿತರರಿದ್ದರು.
VHP campaigns for Hanuman flag on every house in Mangalore.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm