ಬ್ರೇಕಿಂಗ್ ನ್ಯೂಸ್
03-02-24 06:02 pm Mangalore Correspondent ಕರಾವಳಿ
ಉಳ್ಳಾಲ, ಫೆ.3: ಕೋಚಿಮುಲ್ ನೇಮಕಾತಿ ಪರೀಕ್ಷಾ ಹಗರಣದಲ್ಲಿ ಮಂಗಳೂರು ವಿವಿಗೆ ಇಡಿ ದಾಳಿ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಆಡಳಿತದ ವಿರುದ್ದ ಸಿಡಿದೆದ್ದ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಸದಸ್ಯರು ವಿವಿಯ ಕುಲಪತಿ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾಂಗ ಕುಲಸಚಿವರ ಅಮಾನತಿಗೆ ಆಗ್ರಹಿಸಿ ಶನಿವಾರ ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಭಾರೀ ಪೊಲೀಸ್ ಭದ್ರತೆ ಮಧ್ಯೆಯೂ ಎಬಿವಿಪಿ ಕಾರ್ಯಕರ್ತರು ವಿವಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆ ಪ್ರಶ್ನಾಪತ್ರಿಕೆ ಸೋರಿಕೆ ಆರೋಪ ಹೊರಿಸಿದ ಕಾರ್ಯಕರ್ತರು ಮಂಗಳೂರು ವಿವಿ ಅಧಿಕಾರಿಗಳಿಂದಲೇ ಪ್ರಶ್ನೆಪತ್ರಿಕೆ ಮಾರಾಟವಾಗಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆಯ ಜವಾಬ್ದಾರಿ ಹೊತ್ತಿದ್ದ ಮಂಗಳೂರು ವಿವಿ ನಿರ್ಲಕ್ಷ್ಯ ಮಾಡಿದೆ. ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೇಮಕಾತಿ ಪ್ರಕ್ರಿಯೆ ಅವ್ಯವಹಾರ ತನಿಖೆ ನಡೆಸ್ತಿರೋ ಇ.ಡಿ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್ ಅವರನ್ನೂ ವಿಚಾರಣೆ ನಡೆಸಿತ್ತು.

ಕೋಚಿಮುಲ್ ನೇಮಕಾತಿ ಪರೀಕ್ಷಾ ಜವಾಬ್ದಾರಿ ವಹಿಸಿಕೊಂಡಿದ್ದ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿತ್ತು. ಆ ಕಾರಣದಿಂದ ಕೋಚಿಮುಲ್ ನೇಮಕಾತಿ ಹಗರಣದಲ್ಲಿ ಮಂಗಳೂರು ವಿವಿ ನೇರ ಭಾಗಿಯಾದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವಿವಿಯ ಪರಿಕ್ಷಾಂಗ ಕುಲಸಚಿವರ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.
Kochimul scam, Mangalore university, ABVP students protest demand suspension of Registrar. Amid huge security students of Abvp Tried to gherao Mangalore University.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm