ಬ್ರೇಕಿಂಗ್ ನ್ಯೂಸ್
03-02-24 06:02 pm Mangalore Correspondent ಕರಾವಳಿ
ಉಳ್ಳಾಲ, ಫೆ.3: ಕೋಚಿಮುಲ್ ನೇಮಕಾತಿ ಪರೀಕ್ಷಾ ಹಗರಣದಲ್ಲಿ ಮಂಗಳೂರು ವಿವಿಗೆ ಇಡಿ ದಾಳಿ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಆಡಳಿತದ ವಿರುದ್ದ ಸಿಡಿದೆದ್ದ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಸದಸ್ಯರು ವಿವಿಯ ಕುಲಪತಿ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾಂಗ ಕುಲಸಚಿವರ ಅಮಾನತಿಗೆ ಆಗ್ರಹಿಸಿ ಶನಿವಾರ ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಭಾರೀ ಪೊಲೀಸ್ ಭದ್ರತೆ ಮಧ್ಯೆಯೂ ಎಬಿವಿಪಿ ಕಾರ್ಯಕರ್ತರು ವಿವಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆ ಪ್ರಶ್ನಾಪತ್ರಿಕೆ ಸೋರಿಕೆ ಆರೋಪ ಹೊರಿಸಿದ ಕಾರ್ಯಕರ್ತರು ಮಂಗಳೂರು ವಿವಿ ಅಧಿಕಾರಿಗಳಿಂದಲೇ ಪ್ರಶ್ನೆಪತ್ರಿಕೆ ಮಾರಾಟವಾಗಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆಯ ಜವಾಬ್ದಾರಿ ಹೊತ್ತಿದ್ದ ಮಂಗಳೂರು ವಿವಿ ನಿರ್ಲಕ್ಷ್ಯ ಮಾಡಿದೆ. ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೇಮಕಾತಿ ಪ್ರಕ್ರಿಯೆ ಅವ್ಯವಹಾರ ತನಿಖೆ ನಡೆಸ್ತಿರೋ ಇ.ಡಿ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್ ಅವರನ್ನೂ ವಿಚಾರಣೆ ನಡೆಸಿತ್ತು.

ಕೋಚಿಮುಲ್ ನೇಮಕಾತಿ ಪರೀಕ್ಷಾ ಜವಾಬ್ದಾರಿ ವಹಿಸಿಕೊಂಡಿದ್ದ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿತ್ತು. ಆ ಕಾರಣದಿಂದ ಕೋಚಿಮುಲ್ ನೇಮಕಾತಿ ಹಗರಣದಲ್ಲಿ ಮಂಗಳೂರು ವಿವಿ ನೇರ ಭಾಗಿಯಾದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವಿವಿಯ ಪರಿಕ್ಷಾಂಗ ಕುಲಸಚಿವರ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.
Kochimul scam, Mangalore university, ABVP students protest demand suspension of Registrar. Amid huge security students of Abvp Tried to gherao Mangalore University.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm