ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.




ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm